Webdunia - Bharat's app for daily news and videos

Install App

Bank Janardhan: ನಮಗೆ ಯಾರೂ ಅವಕಾಶ ಕೊಡ್ತಿಲ್ಲ ಎಂದು ಬೇಸರಿಸಿದ್ದ ಬ್ಯಾಂಕ್ ಜನಾರ್ಧನ್

Krishnaveni K
ಸೋಮವಾರ, 14 ಏಪ್ರಿಲ್ 2025 (09:06 IST)
Photo Credit: X
ಬೆಂಗಳೂರು: ಇತ್ತೀಚೆಗಿನ ದಿನಗಳಲ್ಲಿ ನಮಗೆ ಯಾರೂ ಅವಕಾಶ ಕೊಡ್ತಿಲ್ಲ ಎಂದು ಹಿರಿಯ ನಟ ಬ್ಯಾಂಕ್ ಜನಾರ್ಧನ್ ಬೇಸರಿಸಿಕೊಂಡಿದ್ದರು. ಇದೀಗ ನಟ ತಮ್ಮ 76 ನೇ ವಯಸ್ಸಿನಲ್ಲಿ ಬದುಕಿನ ಪಾತ್ರ ಮುಗಿಸಿ ಹೊರಟಿದ್ದಾರೆ.

90 ರ ದಶಕದ ಬಹುತೇಕ ಸಿನಿಮಾಗಳಲ್ಲಿ ಹೀರೋ ಸ್ನೇಹಿತ, ಹೀರೋಯಿನ್ ತಂದೆ, ಪಕ್ಕದ ಮನೆಯ ವ್ಯಕ್ತಿ ಹೀಗೆ ಹಲವು ಪಾತ್ರಗಳ ಮೂಲಕ ಬ್ಯಾಂಕ್ ಜನಾರ್ಧನ್ ಜನರನ್ನು ರಂಜಿಸಿದ್ದಾರೆ. ಅದರಲ್ಲೂ ನವರಸನಾಯಕ ಜಗ್ಗೇಶ್ ಅವರ ಬಹುತೇಕ ಸಿನಿಮಾಗಳಲ್ಲಿ ಜನಾರ್ಧನ್ ಇದ್ದೇ ಇದ್ದರು.

ಆದರೆ ಹೊಸಬರ ಹವಾ ಬಂದ ಮೇಲೆ ಕನ್ನಡ ಚಿತ್ರರಂಗದಲ್ಲಿ ಹಳೆಯ ಹಾಸ್ಯ ನಟರು ಸಂಪೂರ್ಣ ಮೂಲೆಗುಂಪಾದರು. ಈ ಬಗ್ಗೆ ಅವರಿಗೆ ಬೇಸರವಿತ್ತು. ಸಂದರ್ಶನವೊಂದರಲ್ಲಿ ನಮ್ಮನ್ನು ಈಗ ಯಾರೂ ಕರೆಯಲ್ಲ ಎಂದು ಬೇಸರಿಸಿಕೊಂಡಿದ್ದರು.

ಬಹುತೇಕ ಅದೇ ಕಾಲಘಟ್ಟದ ಪೋಷಕ ನಟರ ಕತೆ ಇದೇ ಆಗಿತ್ತು. ಈಗಿನ ಸಿನಿಮಾಗಳಲ್ಲಿ ಅವಕಾಶಗಳು ಸಿಗುತ್ತಿಲ್ಲ ಎನ್ನುವ ಬೇಸರ ಬಹುತೇಕ ನಟರಲ್ಲಿದೆ. ಬ್ಯಾಂಕ್ ಜನಾರ್ಧನ್ ಕೂಡಾ ಅದೇ ಬೇಸರ ಹೊಂದಿದ್ದರು. ಆದರೆ ಎಲ್ಲೂ ಯಾರ ಮೇಲೂ ಅಪವಾದ ಹೊರಿಸಿ, ವಿವಾದ ಮಾಡಿಕೊಂಡವರಲ್ಲ ಎಂಬುದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments