ವೈಲ್ಡ್ ಕಾರ್ಡ್ ಸ್ಪರ್ಧಿಯ ಮಾತಿಗೆ ನೊಂದು ಬಿಕ್ಕಿ ಬಿಕ್ಕಿ ಅತ್ತ ಜಾಹ್ನವಿ

Sampriya
ಮಂಗಳವಾರ, 21 ಅಕ್ಟೋಬರ್ 2025 (16:25 IST)
Photo Credit X
ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್ ಸೀಸನ್ 12 ಕ್ಕೆ ಮೊದಲ ಮೂವರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಒಂದೇ ದಿನ ದೊಡ್ಮನೆಗೆ ಕಾಲಿಟ್ಟಿದ್ದಾರೆ. 

ಮೊದಲ ದಿನವೇ ಹವಾ ಎಬ್ಬಿಸಿರುವ ವೈಲ್ಡ್‌ ಕಾರ್ಡ್ ಸ್ಪರ್ಧಿಗಳ ಮಾತಿಂದ್ದ ಕೋಲಾಹಲ ಸೃಷ್ಟಿಯಾಗಿದೆ. ಇನ್ನು ಆರಂಭದಿಂದಲೂ ಉತ್ತಮ ಸ್ನೇಹಿತರಾಗಿದ್ದ ಜಾಹ್ನವಿ ಹಾಗೂ ಅಶ್ವಿನಿ ಗೌಡ ಅವರ ಮಧ್ಯೆ ಬಂದಿರುವ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಅಸಮಾಧಾನವನ್ನು ಹೊರಹಾಕಿದ್ದಾರೆ. 

ಇನ್ನೂ ಅಶ್ವಿನಿ ಅವರು ಜಾಹ್ನವಿ ಅವರನ್ನು ಬಳಸಿಕೊಳ್ಳುತ್ತಿದ್ದಾರೆಂದು ರಿಷಿ ಕಿವಿಮಾತು ಹೇಳಿದ್ದಾರೆ. 

ಕಲರ್ಸ್ ಕನ್ನಡ ಸಾಮಾಜಿಕ ಮಾಧ್ಯಮದಲ್ಲಿ ಪ್ರೊಮೋ ಒಂದನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಜಾಹ್ನವಿಗೆ ರಿಷಾ ಕೆಲವೊಂದು ಕಿವಿಮಾತು ಹೇಳಿದ್ದಾರೆ. ರಿಷಾ ಮಾತನ್ನು ಕೇಳಿದ ಜಾಹ್ನವಿ ಅವರು ಅಶ್ವಿನಿ ಗೌಡ ಹಾಗೂ ಕಾವ್ಯ ಗೌಡ ಮುಂದೆ ಅತ್ತಿದ್ದಾರೆ.

ಕಲರ್ಸ್ ಕನ್ನಡದ ಪ್ರೋಮೋದಲ್ಲಿ ಏನಿದೆ: 
ಬಿಗ್‌ಬಾಸ್‌ ಮನೆಗೆ ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿರುವ ರಿಷಾ ಅವರು ಜಾಹ್ನವಿ ಮುಂದೆ ಪುಕ್ಕ ಥರನೇ ಇದ್ದು ಬಿಟ್ರೆ ಜಾಹ್ನವಿ ಕಳೆದು ಹೋಗುತ್ತಾರೆ. ಸಾಕಷ್ಟು ಕೆಲಸ ಮಾಡಬೇಕು ಎಂದು ಕನಸು ಕಟ್ಟಿಕೊಂಡು ಬಂದಿರುತ್ತೀರಾ. ಈಗ ನಿಮಗೆ ನೀವೇ ಮುಳ್ಳಾಗುತ್ತಿದ್ದೀರಾ ಎಂದು ಅನಿಸುತ್ತಿದೆ’ ಅಂತ ಹೇಳಿದ್ದಾರೆ. 

ಇದಾದ ಬಳಿಕ ಜಾಹ್ನವಿ ‘ನನ್ನ ಗುಂಡಿನಾ ನಾನೇ ತೋಡಿಕೊಳ್ಳುತ್ತಿದ್ದೇನೆ ಎಂದು ಅನಿಸುತ್ತದೆ’ ಅಂತ ಕಣ್ಣೀರಿಟ್ಟಿದ್ದಾರೆ. ಆಗ ಅಶ್ವಿನಿ ಗೌಡ ಎಷ್ಟೇ ಸಮಾಧಾನ ಮಾತುಗಳನ್ನು ಆಡಿದರು ಜಾಹ್ನವಿ ಅಳುತ್ತಲೇ ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಮನೆಯಲ್ಲಿ ರಕ್ಷಿತಾ ಶೆಟ್ಟಿಯೇ ಪ್ರಮುಖ ಟಾರ್ಗೆಟ್‌: ಮತ್ತೊರ್ವ ಮಹಿಳಾ ಸ್ಪರ್ಧಿ ಕಿರಿಕ್‌

ಕಿಚ್ಚ ಸುದೀಪ್ ಗೆ ಈ ವಿಚಾರದಲ್ಲಿ ಬಲವಂತ ಮಾಡಿದ್ದೇ ಪತ್ನಿ ಪ್ರಿಯಾ

ಬೆಳಕಿಲ್ಲದ ದೀಪಾವಳಿಯೊಂದಿಗೆ ನಟ ದರ್ಶನ್‌ಗೆ ಬೆನ್ನು ನೋವಿನ ಸಂಕಟ

ದೇವರ ಮಕ್ಕಳಿಗೆ ದೀಪಾವಳಿಗೆ ಸರ್ಪ್ರೈಸ್ ನೀಡಿದ ಸಮಂತಾ ರುತ್ ಪ್ರಭು

ಹೊಸ ಅಧ್ಯಾಯ ಪ್ರಾರಂಭವಾಗುತ್ತಿದೆ: ದೀಪಾವಳಿ ದಿನ ಗುಡ್‌ನ್ಯೂಸ್ ಹಂಚಿಕೊಂಡ ರಶ್ಮಿ ಪ್ರಭಾಕರ್

ಮುಂದಿನ ಸುದ್ದಿ
Show comments