Webdunia - Bharat's app for daily news and videos

Install App

BBK11: ಕಾಮಿಡಿ ಪೀಸ್ ಎಂದ ಲಾಯರ್ ಜಗದೀಶ್ ಗೆ ವಿಶಿಷ್ಟವಾಗಿ ಉತ್ತರ ಕೊಟ್ಟ ಧನರಾಜ್ ಆಚಾರ್ (Video)

Krishnaveni K
ಬುಧವಾರ, 2 ಅಕ್ಟೋಬರ್ 2024 (12:20 IST)
Photo Credit: X
ಬೆಂಗಳೂರು: ಬಿಗ್ ಬಾಸ್ ಸೀಸನ್ 11 ಆರಂಭವಾಗಿ ಎರಡೇ ದಿನದಲ್ಲಿ ಕಾವೇರುತ್ತಿದ್ದು, ಸೈಲೆಂಟ್ ಎಂದುಕೊಂಡಿದ್ದ ಧನರಾಜ್ ಆಚಾರ್ ಕೂಡಾ ತನ್ನನ್ನು ಕಾಮಿಡಿ ಪೀಸ್ ಎಂದಿದ್ದಕ್ಕೆ ಲಾಯರ್ ಜಗದೀಶ್ ಮೇಲೆ ಸಿಟ್ಟಾದ ಘಟನೆ ನಡೆದಿದೆ.

ಬಿಗ್ ಬಾಸ್ ಆರಂಭವಾಗಿ ಒಂದೇ ದಿನಕ್ಕೆ ಚೈತ್ರಾ ಕುಂದಾಪುರ ಮತ್ತು ಸ್ವರ್ಗ ನಿವಾಸಿಗಳ ನಡುವೆ ಕಿತ್ತಾಟ ನಡೆದಿತ್ತು. ನಿನ್ನೆ ನರಕ ನಿವಾಸಿಗಳಾದ ಮಾನಸ ಮತ್ತು ಚೈತ್ರಾ ಕುಂದಾಪುರ ಕಿತ್ತಾಡಿಕೊಂಡಿದ್ದರು. ಆದರೆ ಧನರಾಜ್ ಆಚಾರ್ ಕಿತ್ತಾಡಿದ ವಿಡಿಯೋ ಇಂದು ವೈರಲ್ ಆಗಿದೆ.

ಬಿಗ್ ಬಾಸ್ ಈ ವಾರದ ನಾಮಿನೇಷನ್ ಪ್ರಕ್ರಿಯೆಯ ಆಟವನ್ನು ಮನೆಯ ಸದಸ್ಯರಿಗೆ ನೀಡಿದೆ. ಈ ವೇಳೆ ರೂಲ್ಸ್ ವಿಚಾರದಲ್ಲಿ ಲಾಯರ್ ಜಗದೀಶ್ ಮತ್ತು ಧನರಾಜ್ ಆಚಾರ್ ನಡುವೆ ಕಿತ್ತಾಟವಾಗಿದೆ. ತಳ್ಳಬೇಡಿ ಎಂದು ಧನರಾಜ್ ಆಚಾರ್ ಹೇಳಿದ್ದಕ್ಕೆ ಜಗದೀಶ್ ಕಾಮಿಡಿ ಪೀಸ್ ನಿನ್ನ ಮಾತನ್ನು ಏನು ಕೇಳೋದು ಎಂದು ಹಂಗಿಸಿದ್ದಾರೆ.

ಇದು ಧನರಾಜ್ ಆಚಾರ್ ರನ್ನು ಕೆರಳಿಸಿದೆ. ಮಂಗನಂತೆ ಮುಖ ಮಾಡಿಕೊಂಡು ಜಗದೀಶ್ ಮಾತನ್ನು ಮಿಮಿಕ್ರಿ ಮಾಡಿ ಧನರಾಜ್ ತಿರುಗೇಟು ಕೊಟ್ಟಿದ್ದಾರೆ. ಧನರಾಜ್ ಸಿಟ್ಟಿನಲ್ಲೇ ಪ್ರತಿಕ್ರಿಯಿಸಿದರೂ ಅವರು ಪ್ರತಿಕ್ರಿಯಿಸಿದ ರೀತಿ ನೋಡಿ ಮನೆಯವರ ಮುಖದಲ್ಲಿ ನಗು ಮೂಡಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments