BBK11: ಬಿಗ್ ಬಾಸ್ ಗೆದ್ದ ಮೇಲೆ ಮೊದಲ ಬಾರಿಗೆ ತವರಿಗೆ ಭೇಟಿ ನೀಡಲಿರುವ ಹನುಮಂತ

Krishnaveni K
ಮಂಗಳವಾರ, 28 ಜನವರಿ 2025 (10:41 IST)
ಬೆಂಗಳೂರು: ಬಿಗ್ ಬಾಸ್ ಕನ್ನಡ 11 ರ ವಿಜೇತರಾಗಿ ಹೊರಹೊಮ್ಮಿದ ಹಳ್ಳಿ ಹೈದ ಹನುಮಂತ ಇಂದು ತಮ್ಮ ತವರಿಗೆ ಭೇಟಿ ನೀಡಲಿದ್ದಾರೆ. ಅವರ ಸ್ವಾಗತಕ್ಕೆ ಗ್ರಾಮಸ್ಥರು ಭರ್ಜರಿ ಸಿದ್ಧತೆ ನಡೆಸಿದ್ದಾರೆ.

ಹನುಮಂತ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿಯವರು. ಹನುಮಂತ ಗೆದ್ದಿರುವುದು ಗ್ರಾಮಸ್ಥರಲ್ಲಿ ಸಂಭ್ರಮವುಂಟು ಮಾಡಿದೆ. ಬಿಗ್ ಬಾಸ್ ಗೆ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಹೋಗಿ ವಿನ್ನರ್ ಆಗಿ ಹನುಮಂತ ದಾಖಲೆ ಮಾಡಿದ್ದಾರೆ.

ಬಿಗ್ ಬಾಸ್ ಗೆದ್ದ ಮೇಲೆ ಇಂದು ಮೊದಲ ಬಾರಿಗೆ ಅವರು ತಮ್ಮ ತಂದೆ-ತಾಯಿ ಜೊತೆಗೆ ಗ್ರಾಮಕ್ಕೆ ಭೇಟಿ ನೀಡಲಿದ್ದಾರೆ. ಅವರ ಸ್ವಾಗತಕ್ಕೆ ಡೊಳ್ಳು ಕುಣಿತ, ಭಜನೆ ಹಾಗೂ ಜಾಂಜ್ ಮೇಳ ಆಯೋಜಿಸಿದ್ದಾರೆ. ತಮ್ಮ ಮನೆ ಮಗ ಹನುಮಂತನನ್ನು ಭರ್ಜರಿಯಾಗಿ ಸ್ವಾಗತಿಸಲು ತಯಾರಿ ನಡೆಸಿದ್ದಾರೆ.

ಕುರಿಗಾಹಿಯಾಗಿದ್ದ ಹನುಮಂತನಿಗೆ ಹಾಡುವ ಕಲೆ ಹುಟ್ಟಿನಿಂದ ಬಂದಿದ್ದು. ಜೀ ಕನ್ನಡದ ಸರಿಗಮಪ ರಿಯಾಲಿಟಿ ಶೋ ಮೂಲಕ ಗಮನ ಸೆಳೆದಿದ್ದ ಹನುಮಂತ ತನ್ನ ಮುಗ್ಧತನದಿಂದಲೇ ಎಲ್ಲರ ಗಮನ ಸೆಳೆಯುತ್ತಿದ್ದವರು. ಇದೀಗ ಬಿಗ್ ಬಾಸ್ ಶೋವನ್ನೇ ಗೆದ್ದು ಎಲ್ಲರ ಮೆಚ್ಚುಗೆ ಗಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments