Webdunia - Bharat's app for daily news and videos

Install App

ಬಳ್ಳಾರಿ ದರ್ಬಾರ್ ಬರ್ತಾ ಇದೆ? ಏನೇನಿದಿಯೋ ಒಳಗೆ!

Webdunia
ಸೋಮವಾರ, 26 ಡಿಸೆಂಬರ್ 2016 (11:59 IST)
ಬಳ್ಳಾರಿಯಲ್ಲಿ ನಡೆದಂಥ ಘಟನೆಯನ್ನು ಆಧಾರವಾಗಿಟ್ಟುಕೊಂಡು ನಿರ್ಮಾಣವಾದ ಚಿತ್ರ “ಬಳ್ಳಾರಿ ದರ್ಬಾರ್” ಚಿತ್ರವು ಈ ವಾರ ಬಿಡುಗಡೆಯಾಗುತ್ತಿದೆ. ಬಳ್ಳಾರಿ ಎಂದರೆ ಸಾಮಾನ್ಯವಾಗಿ ಗಣಿ, ಕೆಲವು ರಾಜಕಾರಣಿಗಳ ದರ್ಬಾರ್ ಕಣ್ಣ ಮುಂದೆ ಬರುತ್ತದೆ. 
 
ಇದಕ್ಕೂ ಮುಂಚೆ ‘ತೂಫಾನ್’ ಎಂಬ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದರು ಈ ಚಿತ್ರದ ನಿರ್ದೇಶಕ ಸ್ಮೈಲ್ ಶ್ರೀನು. ಬಳಿಕ ಹೈದರಾಬಾದ್‌ನತ್ತ ಹೊರಳಿದ್ದರು. ಅಲ್ಲಿನ ಕೆಲ ನಿರ್ದೇಶಕರ ಬಳಿ ನಿರ್ದೇಶನದ ಮತ್ತಷ್ಟು ವರಸೆಗಳನ್ನು ಕಲಿತು ಬಂದಿದ್ದಾರೆ. ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಹಾಗೂ ನಿರ್ಮಾಣವೂ ಶ್ರೀನು ಅವರದ್ದೇ ಎಂಬುದು ವಿಶೇಷ.
 
‘ಸೇಡಿನ ಜತೆಗೆ ಪ್ರೀತಿಯ ದರ್ಬಾರ್ ಕೂಡ ಈ ಚಿತ್ರದಲ್ಲಿದೆ. ಬಳ್ಳಾರಿ ಸುತ್ತಮುತ್ತ 70 ದಿನ ಚಿತ್ರೀಕರಣ ನಡೆಸಲಾಗಿದ್ದು, ತೆಲುಗು ಚಿತ್ರಗಳಲ್ಲಿರುವ ಮಾಸ್ ಅಂಶಗಳು ಕಣ್ಮುಂದೆ ಬರುವಂತಿವೆ ಎನ್ನುತ್ತಾರೆ ಶ್ರೀನು. ಒಟ್ಟಾರೆ ಣಿಗಾರಿಕೆಯಿಂದ ಬಳ್ಳಾರಿಯ ಮೇಲೆ ಆಗಿರುವ ಪರಿಣಾಮದ ಬಗ್ಗೆ ಚಿತ್ರ ಬೆಳಕು ಚೆಲ್ಲಲಿದೆಯಂತೆ. 
 
ಕಳೆದ 15 ವರ್ಷಗಳಿಂದ ಬಳ್ಳಾರಿಯಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಏನೆಲ್ಲಾ ನಡೆಯಿತು,  ನಂತರ ಅಲ್ಲಿ ಯಾವ ರೀತಿ ಬದಲಾವಣೆಯಾಗಿದೆ  ಎಂಬುದನ್ನು ನೈಜ ಘಟನೆಯನ್ನಾಧಾರಿಸಿ ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ ನಿರ್ದೇಶಕ ಸೈಲ್‌ ಶ್ರೀನು. ಕುತೂಹಲ ಮೂಡಿಸಿರುವ ಅಂಶ ಎಂದರೆ ಈ ಚಿತ್ರದಲ್ಲಿ ಮಾಜಿ ಸಚಿವ ಜನಾರ್ದನರೆಡ್ಡಿ ಇರ್ತಾರಾ ಅನ್ನೋದು? 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments