ಬೆಂಗಳೂರು ಕಂಬಳ: ಇಂದು, ನಾಳೆ ಬರಲಿರುವ ಸ್ಟಾರ್ ನಟ-ನಟಿಯರು

Webdunia
ಶನಿವಾರ, 25 ನವೆಂಬರ್ 2023 (09:00 IST)
Photo Courtesy: Twitter
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಗ್ರಾಮೀಣ ಕ್ರೀಡೆ ಕಂಬಳ ಆಯೋಜಿಸಲಾಗಿದೆ. ಇದಕ್ಕೆ ಸಿನಿ ಕಲಾವಿದರ ದಂಡೇ ಹರಿದುಬರುವ ನಿರೀಕ್ಷೆಯಿದೆ.

ಅರಮನೆ ಮೈದಾನದಲ್ಲಿ ಕಂಬಳ ನಡೆಯಲಿದ್ದು, ಇದಕ್ಕಾಗಿ ಮೊನ್ನೆಯೇ ಕಂಬಳದ ಕೋಣಗಳು ಬಂದಿಳಿದಿವೆ. ಇಂದು ಮತ್ತು ನಾಳೆ ಕಂಬಳ ಉತ್ಸವ ನಡೆಯಲಿದ್ದು, ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆಯಿದೆ. ಕಂಬಳದ ಜೊತೆಗೆ ಕರಾವಳಿ ಸಂಸ್ಕೃತಿ, ಆಹಾರದ ಅನಾವರಣವೂ ನಡೆಯಲಿದೆ.

ಈ ಕಾರ್ಯಕ್ರಮಕ್ಕೆ ಬಾಲಿವುಡ್, ಸ್ಯಾಂಡಲ್ ವುಡ್, ಟಾಲಿವುಡ್ ಸೇರಿದಂತೆ ವಿವಿಧ ಭಾಷೆಯ ಸಿನಿ ಕಲಾವಿದರಿಗೆ ಆಹ್ವಾನ ನೀಡಲಾಗಿದೆ. ಹೀಗಾಗಿ ಕಂಬಳ ಉತ್ಸವಕ್ಕೆ ತಾರಾ ಮೆರುಗು ಬರಲಿದೆ.

ಬಾಲಿವುಡ್ ತಾರೆಯರಾದ ವಿವೇಕ್ ಓಬೇರಾಯ್, ಸುನಿಲ್ ಶೆಟ್ಟಿ, ಶಿಲ್ಪಾ ಶೆಟ್ಟಿ ಆಗಮಿಸುವ ನಿರಿಕ್ಷೆಯಿದೆ. ಇನ್ನು ಸ್ಯಾಂಡಲ್ ವುಡ್ ಕಲಾವಿದರಾದ ಉಪೇಂದ್ರ, ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್, ದರ್ಶನ್, ರಮೇಶ್ ಅರವಿಂದ್, ರಾಜ್ ಬಿ ಶೆಟ್ಟಿ, ಮೇಘಾ ಶೆಟ್ಟಿ ಭಾಗಿಯಾಗಲಿದ್ದಾರೆ. ಇವರಲ್ಲದೆ ಕರಾವಳಿ ಮೂಲದ ಟಾಲಿವುಡ್ ತಾರೆಯರಾದ ಪೂಜಾ ಹೆಗ್ಡೆ, ಅನುಷ್ಕಾ ಶೆಟ್ಟಿಗೂ ಆಹ್ವಾನ ನೀಡಲಾಗಿದೆ. ಕ್ರಿಕೆಟಿಗ ಕೆಎಲ್ ರಾಹುಲ್ ಗೂ ಆಹ್ವಾನ ನೀಡಲಾಗಿದ್ದು, ಅವರು ಆಗಮಿಸುತ್ತಾರೋ ಎನ್ನುವುದು ಇನ್ನೂ ಖಚಿತವಾಗಿಲ್ಲ. ಒಟ್ಟಾರೆ ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಕರಾವಳಿ ಹಬ್ಬದ ಜೊತೆಗೆ ಮೆಚ್ಚಿನ ತಾರೆಯರನ್ನು ಕಣ್ತುಂಬಿಕೊಳ್ಳುವ ಅವಕಾಶ ಸಿಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಮುಂದಿನ ಸುದ್ದಿ
Show comments