Select Your Language

Notifications

webdunia
webdunia
webdunia
webdunia

Bengaluru Water Crisis: ಅಣ್ಣ ಚಿರು ಹೆಸರಲ್ಲಿ ಧ್ರುವ ಸರ್ಜಾರಿಂದ ಉಚಿತ ನೀರು ಸರಬರಾಜು

Dhruva Sarja

Krishnaveni K

ಬೆಂಗಳೂರು , ಗುರುವಾರ, 7 ಮಾರ್ಚ್ 2024 (11:17 IST)
Photo Courtesy: Twitter
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಾರಕಕ್ಕೇರಿದೆ. ಜನ ಕುಡಿಯುವ ನೀರಿಗೂ ಬವಣೆ ಪಡುತ್ತಿದ್ದಾರೆ. ಹಿಂದೆಂದೂ ಕಾಣದ ಬರಗಾಲ ಎದುರಾಗಿದೆ. ಇದೀಗ ನಟ ಧ್ರುವ ಸರ್ಜಾ ನೀರಿನ ದಾಹ ತೀರಿಸುವ ಕೆಲಸಕ್ಕೆ ಮುಂದಾಗಿದ್ದಾರೆ.

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ತಮ್ಮ ಕೈಲಾದ ಸಹಾಯ ಮಾಡಲು ಯಾವತ್ತೂ ಹಿಂದೆ ಮುಂದೆ ನೋಡಲ್ಲ. ಇದೀಗ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು ಜನರ ಸಂಕಷ್ಟದಲ್ಲಿದ್ದಾರೆ. ಇಂತಹ ಸ್ಥಿತಿಯಲ್ಲಿ ಧ್ರುವ ತಮ್ಮ ಫ್ಯಾನ್ಸ್ ಮೂಲಕ ಟ್ಯಾಂಕರ್ ನಲ್ಲಿ ಕುಡಿಯುವ ನೀರು ಪೂರೈಸುವ ಕೆಲಸಕ್ಕೆ ಮುಂದಾಗಿದ್ದಾರೆ.

ನಟ ಧ್ರುವ ಸರ್ಜಾ ಅಭಿಮಾನಿಗಳ ಬಳಗ ಬಡ ಜನರಿಗೆ ಉಚಿತವಾಗಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಕೆಂಗೇರಿಯ ಕಾಲೊನಿಗಳಿಗೆ ತೆರಳಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸುತ್ತಿದ್ದಾರೆ. ಧ‍್ರುವ ಕೆಲಸಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಿನಿಮಾ ಸ್ಟಾರ್ ಗಳೆಂದರೆ ಜನ ದೇವರಂತೆ ನೋಡುತ್ತಾರೆ. ಆದರೆ ಅದಕ್ಕೆ ತಕ್ಕಂತೆ ಅವರು ನಡೆದುಕೊಂಡರೆ ಮಾತ್ರ ಬೆಲೆ. ಈಗ ಧ್ರುವ ಕೂಡಾ ಸಂಕಷ್ಟದ ಸಮಯದಲ್ಲಿ ನೀರು ಪೂರೈಸುವ ಮೂಲಕ ಜನರ ಕಷ್ಟಕ್ಕೆ ನೆರವಾಗಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ನೀರಿನ ಸಂಕಷ್ಟ ಇನ್ನಷ್ಟು ಹೆಚ್ಚಾಗುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಜಾಕ್ವೆಲಿನ್ ಫರ್ನಾಂಡಿಸ್ ಮನೆಯ ಬಿಲ್ಡಿಂಗ್ ನಲ್ಲಿ ಬೆಂಕಿ