ಕಿಚ್ಚ ಸುದೀಪ್ ಸಿಎಂ ಭೇಟಿ ಮಾಡಿದ್ದಕ್ಕೆ ಭಾರತಿ ವಿಷ್ಣುವರ್ಧನ್ ಗೆ ಸಿಟ್ಟು ಬಂದಿದ್ದೇಕೆ?

Webdunia
ಮಂಗಳವಾರ, 12 ಡಿಸೆಂಬರ್ 2017 (09:50 IST)
ಬೆಂಗಳೂರು: ನಿನ್ನೆಯಷ್ಟೇ ನಟ ಕಿಚ್ಚ ಸುದೀಪ್ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಾಹಸಸಿಂಹ ವಿಷ್ಣು ವರ್ಧನ್ ಸ್ಮಾರಕ ವಿಚಾರ ಚರ್ಚಿಸಿದ್ದರು. ಆದರೆ ಇದೀಗ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಕೆಂಗಣ್ಣಿಗೆ ಗುರಿಯಾಗಿದೆ.
 

ಸಿಎಂ ಭೇಟಿ ಮಾಡಿದ್ದ ಸುದೀಪ್, ವಿಷ್ಣುವರ್ಧನ್ ಸಮಾಧಿ ಸ್ಥಳ ಪುಣ್ಯ ಭೂಮಿ. ಅದನ್ನು ಮೈಸೂರಿಗೆ ಸ್ಥಳಾಂತರಿಸಬೇಡಿ. ಸ್ಮಾರಕ ಎಲ್ಲಿ ಬೇಕಾದರೂ ನಿರ್ಮಿಸಿ ಎಂದು ಮನವಿ ಪತ್ರವನ್ನೂ ನೀಡಿದ್ದರು.

ಆದರೆ ಇದಕ್ಕೆ ಭಾರತಿ ವಿಷ್ಣುವರ್ಧನ್ ಆಕ್ಷೇಪಿಸಿದ್ದಾರೆ. ಈ ಮೊದಲಿನಿಂದಲೂ ಭಾರತಿ ವಿಷ್ಣುವರ್ಧನ್ ಸಮಾಧಿಯನ್ನು ಮೈಸೂರಿಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದರು. ಆದರೆ ಇದೀಗ ಸುದೀಪ್ ಬೆಂಗಳೂರಿನಲ್ಲಿಯೇ ಸ್ಮಾರಕವಿರಲಿ. ಚಿತ್ರರಂಗ ಆ ಸ್ಥಳವನ್ನು ಖರೀದಿಸುತ್ತದೆ ಎಂದಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

ವಿಷ್ಣು ಸಮಾಧಿ ಮೈಸೂರಿಗೆ ಸ್ಥಳಾಂತರಿಸುವ ಕುರಿತು ಈಗಾಗಲೇ ಸಿಎಂ ಒಪ್ಪಿದ್ದರು. ಇದಕ್ಕೆ 2 ಕೋಟಿ ರೂ. ಮೀಸಲಿರಿಸಿದೆ. ಇಲ್ಲಿ ಹಣದ ಪ್ರಶ್ನೆಯಲ್ಲ. ಸುದೀಪ್ ಗೆ ಇಲ್ಲಿನ ಸಮಸ್ಯೆ ಗೊತ್ತಿಲ್ಲ. ಹಣದ ಕೊರತೆಯಿದ್ದರೆ ನಮ್ಮ ಕುಟುಂಬವೇ ಭರಿಸುತ್ತಿತ್ತು. ಯಾರ್ಯಾರು ಬಂದು ಸಿಎಂರನ್ನು ಭೇಟಿಯಾಗಿ ಚರ್ಚಿಸುತ್ತಾರೆ ಎಂದು ನಮಗೇ ಗೊತ್ತಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments