Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಭಾರತಿ ವಿಷ್ಣುವರ್ಧನ್ ಹೇಳಿದ್ದೇನು

Krishnaveni K
ಬುಧವಾರ, 3 ಸೆಪ್ಟಂಬರ್ 2025 (12:11 IST)
ಬೆಂಗಳೂರು: ಇಂದು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಮನವಿಯೊಂದನ್ನು ಸಲ್ಲಿಸಿದ್ದಾರೆ. ಅಷ್ಟಕ್ಕೂ ಅವರು ಸಿಎಂ ಬಳಿ ಏನೆಲ್ಲಾ ಮನವಿ ಮಾಡಿದ್ದಾರೆ? ಇಲ್ಲಿದೆ ನೋಡಿ ವಿವರ.

ಸಾಹಸಸಿಂಹ ಡಾ ವಿಷ್ಣುವರ್ಧನ್ ಸಮಾಧಿಯಿದ್ದ ಸ್ಥಳವನ್ನು ಇತ್ತೀಚೆಗೆ ಅಭಿಮಾನ್ ಸ್ಟುಡಿಯೋ ಮಾಲಿಕರಾದ ಬಾಲಣ್ಣ ಕುಟುಂಬಸ್ಥರು ನೆಲಸಮ ಮಾಡಿದ್ದರು. ಇದರ ಬೆನ್ನಲ್ಲೇ ನಿಯಮ ಉಲ್ಲಂಘನೆ ಹಿನ್ನಲೆಯಲ್ಲಿ ಸರ್ಕಾರ ಈ ಭೂ ಪ್ರದೇಶವನ್ನು ಅರಣ್ಯ ಇಲಾಖೆಗೆ ಒಪ್ಪಿಸಲು ಜಿಲ್ಲಾಧಿಕಾರಿಗಳಿಗೆ ನೋಟಿಸ್ ನೀಡಿತ್ತು.

ಇದರ ಬೆನ್ನಲ್ಲೇ ಈಗ ವಿಷ್ಣುವರ್ಧನ್ ಪತ್ನಿ ಭಾರತಿ ವಿಷ್ಣುವರ್ಧನ್ ಮತ್ತು ಅಳಿಯ, ನಟ ಅನಿರುದ್ಧ ಜತಕರ ಸಿಎಂ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಅಭಿಮಾನಿಗಳಿಗಾಗಿ ಸಮಾಧಿ ಸ್ಥಳದಲ್ಲಿ 10 ಗುಂಟೆ ಜಾಗ ಬಿಟ್ಟುಕೊಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಇಂದು ಕಾವೇರಿ ನಿವಾಸದಲ್ಲಿ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಪತ್ರದಲ್ಲಿ ‘ಮೈಸೂರಿನಲ್ಲಿ ಡಾ ವಿಷ್ಣುವರ್ಧನ್ ರವರ ಸ್ಮಾರಕವನ್ನು ನಿರ್ಮಿಸಿ ಕನ್ನಡಿಗರ ಹೃದಯದಲ್ಲಿ ವಿಷ್ಣುವರ್ಧನ್ ಅವರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ಆದರೆ ಬೆಂಗಳೂರಿನಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ಬೇಡಿಕೆಯಾಗಿದೆ. ಬೆಂಗಳೂರಿನಲ್ಲಿರುವ ಈ ಸ್ಥಳವು ಅಭಿಮಾನಿಗಳಿಗೆ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಅಭಿಮಾನ್ ಸ್ಟುಡಿಯೋ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ಕಾರ ಘೋಷಿಸಿದೆ. ಹೀಗಾಗಿ ಅಭಿಮಾನ್ ಸ್ಟುಡಿಯೋ ವ್ಯಾಪ್ತಿಯಲ್ಲಿ 10 ಗುಂಟೆ ಜಾಗವನ್ನು ಮೀಸಲಿಟ್ಟು ಡಾ ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ನೀಡಬೇಕೆಂದು ಕೇಳಿಕೊಳ್ಳುತ್ತೆನೆ’ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಯಶ್ ಯಾವತ್ತೂ ಕನ್ನಡಿಗರು ತಲೆ ತಗ್ಗಿಸುವ ಕೆಲಸ ಮಾಡಲ್ಲ: ಟಾಕ್ಸಿಕ್ ಟ್ರೈಲರ್ ನಲ್ಲಿ ಯಶ್ ಪ್ರಾಮಿಸ್ Video

ಟಾಕ್ಸಿಕ್ ಟ್ರೈಲರ್ ಬಿಡುಗಡೆ: ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ Video

ದೀಪಾವಳಿಗೆ ಡಬಲ್‌ ಧಮಾಕಾ: ಹಬ್ಬದ ಸಂಭ್ರಮದಲ್ಲೇ ತೆರೆಗೆ ಅಪ್ಪಲಿಸಲಿದೆ ರಾಮಾಯಣ ಸಿನಿಮಾ

ಜೈಲಿನಲ್ಲಿರುವ ನಟ ದರ್ಶನ್ ಗೆ ಈಗ ಶುರುವಾಗಿ ಟೆನ್ಷನ್: ಆಪ್ತರೇ ಹೀಗೆ ಮಾಡಿದರಲ್ಲಾ...

ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣದಲ್ಲಿ ಸಲ್ಮಾನ್‌ ಖಾನ್‌, ಸಹೋದರಿ ಅಲ್ವಿರಾ ಖಾನ್‌ಗೆ ಸಂಕಷ್ಟ

ಮುಂದಿನ ಸುದ್ದಿ
Show comments