Webdunia - Bharat's app for daily news and videos

Install App

‘ಜಾಕಿ’ ಭಾವನಾ ಮೆನನ್ ಮನದಾಳದ ನೋವಿಗೆ ಸ್ಪಂದಿಸಿದ ಸಿನಿ ತಾರೆಯರು

Webdunia
ಬುಧವಾರ, 12 ಜನವರಿ 2022 (09:00 IST)
ಬೆಂಗಳೂರು: 2017 ರಲ್ಲಿ ತಮ್ಮ ಮೇಲಾದ ಕಿರುಕುಳದ ಬಗ್ಗೆ ಜಾಕಿ ನಟಿ ಭಾವನಾ ಮೆನನ್ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಮನದಾಳದ ಮಾತು ಹಂಚಿಕೊಂಡಿದ್ದರು. ಅವರ ಪೋಸ್ಟ್ ವೈರಲ್ ಆಗಿದ್ದು, ಬಹುತೇಕ ಮಲಯಾಳಂ ಸಿನಿಮಾ ತಾರೆಯರು, ಸ್ಯಾಂಡಲ್ ವುಡ್ ಹಿರಿಯ ನಟಿ ಸುಮಲತಾ ಅಂಬರೀಶ್ , ಮೇಘನಾ ರಾಜ್ ಕೂಡಾ ಭಾವನಾಗೆ ಬೆಂಬಲ ಸೂಚಿಸಿದ್ದಾರೆ.

2017 ರಲ್ಲಿ ತ್ರಿಶ್ಶೂರ್ ನಲ್ಲಿ ಚಿತ್ರೀಕರಣ ಮುಗಿಸಿ ಬರುತ್ತಿದ್ದಾಗ ದುಷ್ಕರ್ಮಿಗಳು ಭಾವನಾರನ್ನು 2 ಗಂಟೆ ಕಾಲ ಕಾರಿನಲ್ಲೇ ತಿರುಗಾಡಿಸಿ ಲೈಂಗಿಕ ಕಿರುಕುಳ ನೀಡಿದ್ದರು. ಈ ಪ್ರಕರಣದಲ್ಲಿ ಮಲಯಾಳಂ ಖ್ಯಾತ ನಟ ದಿಲೀಪ್ ಮೇಲೆ ಆರೋಪವಿದೆ. ಇದರ ವಿಚಾರಣೆ ಈಗಲೂ ನಡೆಯುತ್ತಿದೆ.

ಇದರ ಬಗ್ಗೆ ಭಾವನಾ ಮೊದಲ ಬಾರಿಗೆ ಮಾತನಾಡಿದ್ದು, ತನಗೆ ಬೆಂಬಲವಾಗಿ ನಿಂತವರಿಗೆ ಧನ್ಯವಾದ ಸಲ್ಲಿಸಿದ್ದರು. ಇದೀಗ ಮಲಯಾಳಂ ಸೂಪರ್ ಸ್ಟಾರ್ ಮೋಹನ್ ಲಾಲ್, ಪೃಥ್ವಿ ರಾಜ್, ಟೊವಿನೊ ಥಾಮಸ್, ದಿಲೀಪ್ ಮಾಜಿ ಪತ್ನಿ, ಖ್ಯಾತ ನಟಿ ಮಂಜು ವಾರಿಯರ್ ಸೇರಿದಂತೆ ಅನೇಕರು ಭಾವನಾರನ್ನು ಬೆಂಬಲಿಸಿ ಆ ಪೋಸ್ಟ್ ನ್ನು ರಿಪೋಸ್ಟ್ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಸ್ಯಾಂಡಲ್ ವುಡ್ ನಟಿ, ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದು, ‘ಆಕೆಯ ಧೈರ್ಯ ಮನೋಭಾವವನ್ನು ಮೆಚ್ಚುತ್ತೇನೆ. ಏನೂ ತಪ್ಪು ಮಾಡದೇ ಯಾಕೆ ಮೌನವಾಗಿ ಸಹಿಸಿಕೊಂಡು ಕೂರಬೇಕು?’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ