Webdunia - Bharat's app for daily news and videos

Install App

ತಂದೆಯ ಸ್ಮಾರಕ ನಿರ್ಮಾಣಕ್ಕೆ ಅಯೋದ್ಯೆಯಲ್ಲಿ ಭೂ ಖರೀದಿಸಿದ ಬಿಗ್‌ಬಿ

Sampriya
ಮಂಗಳವಾರ, 11 ಮಾರ್ಚ್ 2025 (19:29 IST)
Photo Courtesy X
ಬೆಂಗಳೂರು: ಬಿಗ್‌ಬಿ ಅಮಿತಾಬ್ ಬಚ್ಚನ್ ಅವರು ಅಯೋಧ್ಯೆಯಲ್ಲಿ 54,454 ಚದರ ಅಡಿ ವಿಸ್ತೀರ್ಣದ ಮತ್ತೊಂದು ಭೂಮಿಯನ್ನು ಖರೀದಿಸಿದ್ದಾರೆ, ಇದು ಪೂಜ್ಯ ರಾಮ ಮಂದಿರದಿಂದ ಕೇವಲ 10 ಕಿಲೋಮೀಟರ್ ದೂರದಲ್ಲಿದೆ.

ಹರಿದಾಡುತ್ತಿರುವ ವರದಿಗಳ ಪ್ರಕಾರ, ಅವರು ತಮ್ಮ ತಂದೆ ಹರಿವಂಶ್ ರಾಯ್ ಬಚ್ಚನ್ ಅವರ ಸ್ಮಾರಕವನ್ನು ನಿರ್ಮಿಸುವ ಸಲುವಾಗಿ ಈ ಭೂಮಿಯನ್ನು ಖರೀದಿಸಿದ್ದಾರೆ ಎನ್ನಲಾಗಿದೆ.

ನಟ ಹರಿವಂಶ್ ರಾಯ್ ಬಚ್ಚನ್ ಸ್ಮಾರಕ ಟ್ರಸ್ಟ್ ಅನ್ನು 2013 ರಲ್ಲಿ ಪ್ರಾರಂಭಿಸಿದ್ದರು. TOI ಯಲ್ಲಿನ ವರದಿಯ ಪ್ರಕಾರ, ಹರಿವಂಶ್ ರಾಯ್ ಬಚ್ಚನ್ ಟ್ರಸ್ಟ್ 54,454 ಚದರ ಅಡಿ ವಿಸ್ತೀರ್ಣದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ, ಇದು ಪ್ರಸಿದ್ಧ ಹಿಂದಿ ಕವಿಯ ಜೀವನ ಮತ್ತು ಕೃತಿಗಳಿಗೆ ಮೀಸಲಾಗಿರುವ ಸ್ಮಾರಕವನ್ನು ನಿರ್ಮಿಸಲು ಸಾಧ್ಯ ಎಂದು ಮಂಗಳವಾರ ತಿಳಿಸಿದೆ.

ಈ ಮೂಲಕ ಅಯೋಧ್ಯೆಯಲ್ಲಿ ಬಚ್ಚನ್ ದಂಪತಿ ಎರಡನೇ ಭೂಮಿಯನ್ನು ಖರೀದಿ ಮಾಡಿದ್ದಾರೆ. ಜನವರಿ 2024 ಬಿಗ್‌ಬಿ 14.50 ಕೋಟಿ ಮೌಲ್ಯದ ವಿಸ್ತಾರವಾದ ಜಮೀನನ್ನು ಖರೀದಿಸಿದ್ದಾರೆಂದು ವರದಿಯಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments