Webdunia - Bharat's app for daily news and videos

Install App

ಅವಧಿ ಮೀರಿ ಪಾರ್ಟಿ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸ್ನೇಹಿತರಿಗೆ ಬಿಗ್ ರಿಲೀಫ್

Krishnaveni K
ಸೋಮವಾರ, 1 ಏಪ್ರಿಲ್ 2024 (13:14 IST)
ಬೆಂಗಳೂರು: ಕಾಟೇರ ಸಕ್ಸಸ್ ಬಳಿಕ ನಗರದ ರೆಸ್ಟೋರೆಂಟ್ ಒಂದರಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದರು ಎಂಬ ಆರೋಪದಲ್ಲಿ ವಿಚಾರಣೆಗೊಳಗಾಗಿದ್ದ ನಟ ದರ್ಶನ್ ಮತ್ತು ಸಂಗಡಿಗರಿಗೆ ಬಿಗ್ ರಿಲೀಫ್ ಸಿಕ್ಕಿದೆ.

;ಪೊಲೀಸರು ಘಟನೆ ಬಗ್ಗೆ ಚಾರ್ಜ್ ಶೀಟ್ ತಯಾರಿಸಿದ್ದು, ಇದರಲ್ಲಿ ದರ್ಶನ್ ಮತ್ತು ಸ್ನೇಹಿತರು ಊಟ ಮಾಡಿದ್ದರಷ್ಟೇ, ಪಾರ್ಟಿ ಮಾಡಿರಲಿಲ್ಲ ಎಂಬ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಇದು ದರ್ಶನ್ ಮತ್ತು ಸ್ನೇಹಿತರಿಗೆ ಬಿಗ್ ರಿಲೀಫ್ ನೀಡಿದೆ.

ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸಿದ್ದರು. ದರ್ಶನ್, ಅಭಿಷೇಕ್ ಅಂಬರೀಸ್, ರಾಕ್ ಲೈನ್ ವೆಂಕಟೇಶ್, ನೀನಾಸಂ ಸತೀಶ್ ಸೇರಿದಂತೆ ರೆಸ್ಟೋರೆಂಟ್ ಗೆ ತೆರಳಿದ್ದ ಎಲ್ಲಾ ಸೆಲೆಬ್ರಿಟಿಗಳು ಖುದ್ದಾಗಿ ಠಾಣೆಗೆ ತೆರಳಿ ಹೇಳಿಕೆ ನೀಡಿದ್ದರು.

ಇದೀಗ ಪೊಲೀಸರು ಆರೋಪ ಪಟ್ಟಿ ತಯಾರಿಸಿದ್ದಾರೆ. ಅದರಂತೆ ದರ್ಶನ್ ಮತ್ತು ಸ್ನೇಹಿತರ ಹೇಳಿಕೆ ಉಲ್ಲೇಖಿಸಲಾಗಿದೆ. ಕೇವಲ ಊಟ ಮಾತ್ರ ಮಾಡಿದ್ದಾಗಿ ದರ್ಶನ್ ನೀಡಿದ್ದ ಹೇಳಿಕೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಹೀಗಾಗಿ ದರ್ಶನ ಮತ್ತು ಸ್ನೇಹಿತರಿಗೆ ರಿಲೀಫ್ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments