Webdunia - Bharat's app for daily news and videos

Install App

ಅವಧಿ ಮೀರಿ ಪಾರ್ಟಿ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಸ್ನೇಹಿತರಿಗೆ ಬಿಗ್ ರಿಲೀಫ್

Krishnaveni K
ಸೋಮವಾರ, 1 ಏಪ್ರಿಲ್ 2024 (13:14 IST)
ಬೆಂಗಳೂರು: ಕಾಟೇರ ಸಕ್ಸಸ್ ಬಳಿಕ ನಗರದ ರೆಸ್ಟೋರೆಂಟ್ ಒಂದರಲ್ಲಿ ಅವಧಿ ಮೀರಿ ಪಾರ್ಟಿ ಮಾಡಿದ್ದರು ಎಂಬ ಆರೋಪದಲ್ಲಿ ವಿಚಾರಣೆಗೊಳಗಾಗಿದ್ದ ನಟ ದರ್ಶನ್ ಮತ್ತು ಸಂಗಡಿಗರಿಗೆ ಬಿಗ್ ರಿಲೀಫ್ ಸಿಕ್ಕಿದೆ.

;ಪೊಲೀಸರು ಘಟನೆ ಬಗ್ಗೆ ಚಾರ್ಜ್ ಶೀಟ್ ತಯಾರಿಸಿದ್ದು, ಇದರಲ್ಲಿ ದರ್ಶನ್ ಮತ್ತು ಸ್ನೇಹಿತರು ಊಟ ಮಾಡಿದ್ದರಷ್ಟೇ, ಪಾರ್ಟಿ ಮಾಡಿರಲಿಲ್ಲ ಎಂಬ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ಇದು ದರ್ಶನ್ ಮತ್ತು ಸ್ನೇಹಿತರಿಗೆ ಬಿಗ್ ರಿಲೀಫ್ ನೀಡಿದೆ.

ಸುಬ್ರಹ್ಮಣ್ಯ ನಗರ ಠಾಣೆ ಪೊಲೀಸರು ಘಟನೆ ಬಗ್ಗೆ ತನಿಖೆ ನಡೆಸಿದ್ದರು. ದರ್ಶನ್, ಅಭಿಷೇಕ್ ಅಂಬರೀಸ್, ರಾಕ್ ಲೈನ್ ವೆಂಕಟೇಶ್, ನೀನಾಸಂ ಸತೀಶ್ ಸೇರಿದಂತೆ ರೆಸ್ಟೋರೆಂಟ್ ಗೆ ತೆರಳಿದ್ದ ಎಲ್ಲಾ ಸೆಲೆಬ್ರಿಟಿಗಳು ಖುದ್ದಾಗಿ ಠಾಣೆಗೆ ತೆರಳಿ ಹೇಳಿಕೆ ನೀಡಿದ್ದರು.

ಇದೀಗ ಪೊಲೀಸರು ಆರೋಪ ಪಟ್ಟಿ ತಯಾರಿಸಿದ್ದಾರೆ. ಅದರಂತೆ ದರ್ಶನ್ ಮತ್ತು ಸ್ನೇಹಿತರ ಹೇಳಿಕೆ ಉಲ್ಲೇಖಿಸಲಾಗಿದೆ. ಕೇವಲ ಊಟ ಮಾತ್ರ ಮಾಡಿದ್ದಾಗಿ ದರ್ಶನ್ ನೀಡಿದ್ದ ಹೇಳಿಕೆಯನ್ನು ಪೊಲೀಸರು ಪರಿಗಣನೆಗೆ ತೆಗೆದುಕೊಂಡಿದ್ದಾರೆ. ಹೀಗಾಗಿ ದರ್ಶನ ಮತ್ತು ಸ್ನೇಹಿತರಿಗೆ ರಿಲೀಫ್ ಸಿಕ್ಕಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments