ನವದೆಹಲಿ: ಪಹಲ್ಗಾಮ್ ಭಯೋತ್ಪಾದನಾ ದಾಳಿಯ ನಂತರ ಬುಡಕಟ್ಟು ಸಮುದಾಯದ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯನ್ನು ಉಲ್ಲೇಖಿಸಿ ಪಿಟಿಐ ಭಾನುವಾರ ವರದಿ ಮಾಡಿದೆ.
ಇಲ್ಲಿ ನಡೆದ ಸಿನಿಮಾ ಪ್ರೀ ರಿಲೀಸ್ ಸಮಾರಂಭದಲ್ಲಿ ಬುಡಕಟ್ಟು ಜನರ ಬಗ್ಗೆ ಆಡಿದ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಈ ವರ್ಷದ ಏಪ್ರಿಲ್ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡುವಾಗ ನಟ ಪಹಲ್ಗಾಮ್ನಲ್ಲಿ ನಡೆದ ಇತ್ತೀಚಿನ ಭಯೋತ್ಪಾದಕ ದಾಳಿಯನ್ನು 500 ವರ್ಷಗಳ ಹಿಂದಿನ ಬುಡಕಟ್ಟು ಯುದ್ಧಗಳಿಗೆ ಹೋಲಿಸಿದ್ದಾರೆ.
ನಟ ಏಪ್ರಿಲ್ನಲ್ಲಿ ಕಾಮೆಂಟ್ಗಳನ್ನು ಮಾಡಿದರು. ಆದಾಗ್ಯೂ, ದೂರಿನ ಆಧಾರದ ಮೇಲೆ ಜೂನ್ 17 ರಂದು ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ನಾಯಕ ಸೂರ್ಯ ಅಭಿನಯದ 'ರೆಟ್ರೋ' ಸಿನಿಮಾದ ಪ್ರೀ ರಿಲೀಸ್ ಸಮಾರಂಭದಲ್ಲಿ ಭಾಗವಹಿಸಿದ್ದ ನಟ, ಆದಿವಾಸಿಗಳ ಭಾವನೆಗೆ ಧಕ್ಕೆ ತರುವಂತಹ ಹೇಳಿಕೆ ನೀಡಿ, ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿ ರಾಜ್ಯಾಧ್ಯಕ್ಷ ನೆನವತ್ ಅಶೋಕ್ ನಾಯ್ಕ್ ಅಲಿಯಾಸ್ ಅಶೋಕ್ ರಾಥೋಡ್ ಸಲ್ಲಿಸಿರುವ ದೂರಿನಲ್ಲಿ ಆರೋಪಿಸಿದ್ದರು.