Webdunia - Bharat's app for daily news and videos

Install App

BigBoss Season11: ಟಾಸ್ಕ್ ವಿಚಾರಕ್ಕೆ ಕೈ ಕೈ ಮಿಲಾಯಿಸಲು ಮುಂದಾದ ರಜತ್-ಉಗ್ರಂ ಮಂಜು

Sampriya
ಮಂಗಳವಾರ, 17 ಡಿಸೆಂಬರ್ 2024 (19:05 IST)
Photo Courtesy X
ಬೆಂಗಳೂರು: ವೈಲ್ಡ್ ಕಾರ್ಡ್ ಸ್ಪರ್ಧಿಯಾಗಿ ಬಿಗ್‌ಬಾಸ್ ಮನೆಗೆ ಎಂಟ್ರಿಕೊಟ್ಟ ರಜತ್ ಕಿಶನ್ ಅವರು ತಮ್ಮ ಮಾತಿನಿಂದ ಈಗಾಗಲೇ ಸಹಸ್ಪರ್ಧಿಗಳಿಗೆ ಟಾಂಗ್ ನೀಡುತ್ತಿದ್ದಾರೆ. ಇದೀಗ ಇಂದಿನ ಎಪಿಸೋಡ್‌ನಲ್ಲಿ ರಜತ್ ಹಾಗೂ ಉಗ್ರಂ ಮಂಜು ನಡುವೆ ಗಲಾಟೆ ಜೋರಾಗಿದೆ.

ಚೆಂಡು ಸಾಗಲಿ ಮುಂದೆ ಹೋಗಲಿ ಎನ್ನುವ ಟಾಸ್ಕ್‌ನಲ್ಲಿ ಒಂದು ತಂಡದ ಉಸ್ತುವಾರಿಯನ್ನು ಚೈತ್ರಾ ಕುಂದಾಪುರ ಅವರು ವಹಿಸಿಕೊಂಡಿದ್ದರು.  ಈ ವೇಳೆ, ಚೈತ್ರಾ ಹಾಗೂ ರಜತ್ ನಡುವೆ ಮಾತಿನ ಚಕಮಕಿ ನಡೆದಿದೆ. ಟಿವಿಯಲ್ಲಿ ಗೇಮ್ ನೋಡಿಕೊಂಡು ಬಂದವರ ಕಥೆ ಇದೆ ಎಂದು ರಜತ್ ಬಗ್ಗೆ ಮಂಜು ಕೆಂಡಕಾರಿದ್ದಾರೆ. ಆಗ ಯೋಗ್ಯತೆಯ ಮಾತುಗಳು ಬಂದಿವೆ. ಮಂಜು ಅವರು ರಜತ್ ಅವರ ಮೈ ಮೇಲೆ ಹೋಗಿದ್ದಾರೆ.

ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ರಜತ್ ಹಾಗೂ ಉಗ್ರಂ ಮಂಜು ನಡುವೆ ಮಾತಿನ ಚಕಮಕಿ ಜೋರಾಗಿ ನಡೆದಿದೆ.

ಕಳೆದ ವಾರ ಧನರಾಜ್ ನಡುವೆ ರಜತ್ ಮಾಡಿದ ಗಲಾಟೆ ವಿಚಾರವಾಗಿ ಕಿಚ್ಚ ಸುದೀಪ್ ಅವರು ಈಗಾಗಲೇ ಖಡಕ್ ವಾರ್ನಿಂಗ್ ನೀಡಿ, ಶಿಕ್ಷೆ ನೀಡಿದ್ದರು. ಆದರೂ ಇದೀಗ ಮತ್ತೆ ಮಂಜು ಹಾಗೂ ರಜತ್ ಅವರ ನಡುವೆ ಮಾರಾಮಾರಿಯಾಗಿದೆ. ಹಾಗಾದ್ರೆ ಈ ವಾರಾಂತ್ಯವು ಕೂಡ ರಜತ್‌ಗೆ ಸುದೀಪ್ ಬೆಂಡೆತ್ತುತ್ತಾರಾ? ಕಾದುನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Yash mother: ಸೊಸೆ ರಾಧಿಕಾ ಪಂಡಿತ್ ನನ್ನ ಮಗನಿಗಿಂತಲೂ ಕಿಲಾಡಿ ಎಂದ ಯಶ್ ತಾಯಿ ಪುಷ್ಪ

ಬಹುಭಾಷಾ ತಾರೆ ರಾಶಿ ಖನ್ನಾ ಮೂಗಿನಲ್ಲಿ ರಕ್ತ ಕಂಡು ಗಾಬರಿಯಾದ ಫ್ಯಾನ್ಸ್‌: ಶೂಟಿಂಗ್‌ ವೇಳೆ ಏನಾಯಿತು

Darshan: ದರ್ಶನ್ ಆಂಡ್ ಗ್ಯಾಂಗ್ ಗೆ ಲಾಭವಾಯ್ತು ಸುಪ್ರೀಂಕೋರ್ಟ್ ನ ಈ ವಿಚಾರ

Vijalayakshmi Darshan: ನಮ್ಮತ್ತೆಗೆ ನಾವಿಬ್ರೇ ಸೊಸೆಯಂದಿರು: ವಿಜಯಲಕ್ಷ್ಮಿ ದರ್ಶನ್ ಸಖತ್ ಟಾಂಗ್

Cannes 2025: ಮಗಳ ಜತೆ ಫ್ರಾನ್ಸ್‌ಗೆ ಬಂದಿಳಿದ ಐಶ್ವರ್ಯಾ ರೈ

ಮುಂದಿನ ಸುದ್ದಿ
Show comments