ಬಿಗ್‌ ಬಾಸ್‌ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್​​

Webdunia
ಸೋಮವಾರ, 23 ಅಕ್ಟೋಬರ್ 2023 (21:00 IST)
ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ರಲ್ಲಿ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯೊಬ್ಬ ಅರೆಸ್ಟ್ ಆಗಿದ್ದು, ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ. ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ವರ್ತೂರು ಸಂತೋಷ್ ಬಂಧನವಾಗಿದ್ದು, ಸದ್ಯ ರಾಮೋಹಳ್ಳಿ ಅರಣ್ಯಾಧಿಕಾರಿಗಳ ಕಸ್ಟಡಿಯಲ್ಲಿದ್ದಾರೆ. ವೈಲ್ಡ್​ ಲೈಫ್ ಪ್ರೊಟೆಕ್ಷನ್ ಆಕ್ಟ್ ಅಡಿ ಬಂಧನವಾಗಿದೆ.

ಕುತ್ತಿಗೆಯಲ್ಲಿ ಹುಲಿಯ ಉಗುರು ಇರುವ ಲಾಕೆಟ್ ಹಾಕಿಕೊಂಡಿದ್ದರು. ಈ ಕುರಿತು ಎಫ್​ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ವರ್ತೂರು ಸಂತೋಷ್ ನನ್ನ ಬಂಧಿಸಿರುವ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಟಿವಿಯಲ್ಲಿ ಹುಲಿ ಉಗುರು ಪೆಂಡೆಂಟ್ ಹಾಕಿಕೊಂಡ ವಿಡಿಯೋ ಸಂಬಂಧ ಕೇಸ್ ಹಾಕಲಾಗಿದೆ. ಬಂಧಿತ ಸಂತೋಷ್ ಅವರನ್ನು ಕಗ್ಗಲಿಪುರ ಅರಣ್ಯ ಇಲಾಖೆ ಕಚೇರಿಯಲ್ಲಿಟ್ಟು ವಿಚಾರಿಸಲಾಗುತ್ತಿದೆ. ಇಂದು ಮ್ಯಾಜಿಸ್ಟ್ರೇಟ್ ಮುಂದೆ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ ಎಂದು ಬೆಂಗಳೂರು ಅರಣ್ಯ ಸಂರಕ್ಷಣಾ ಅಧಿಕಾರಿ ರವೀಂದ್ರ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments