Select Your Language

Notifications

webdunia
webdunia
webdunia
webdunia

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ನಟ ಅಲ್ಲು ಅರವಿಂದ್

Sampriya

ಹೈದರಾಬಾದ್‌ , ಶನಿವಾರ, 5 ಜುಲೈ 2025 (14:26 IST)
Photo Credit X
ಹೈದರಾಬಾದ್‌: ಬ್ಯಾಂಕ್ ಹಗರಣ ಪ್ರಕರಣವೊಂದರಲ್ಲಿ ನಟ ಅಲ್ಲು ಅರ್ಜುನ್ ತಂದೆ, ಟಾಲಿವುಡ್‌ ನಿರ್ಮಾಪಕ  ಅಲ್ಲು ಅರವಿಂದ್ ಅವರಿಗೆ ಜಾರಿ ನಿರ್ದೇಶನಾಲಯ ಶಾಕ್ ನೀಡಿದೆ. ಅಲ್ಲು ಅರವಿಂದ್ ಅವರನ್ನು ಸುಮಾರು ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ರಾಮಕೃಷ್ಣ ಎಲೆಕ್ಟ್ರಾನಿಕ್ಸ್‌ ಸಂಸ್ಥೆಗೆ ಸಂಬಂಧಿಸಿದ ₹ 101 ಕೋಟಿ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಅಲ್ಲು ಅರವಿಂದ್ ಅವರನ್ನು ಇಡಿ ವಿಚಾರಣೆ ಎದುರಿಸುವಂತಾಗಿತ್ತು. 2018-19ರ ನಡುವೆ ನಡೆದ ಬ್ಯಾಂಕ್ ವಹಿವಾಟುಗಳ ಸಮಯದಲ್ಲಿ ವಂಚನೆ ನಡೆದಿತ್ತು ಎಂದು ವರದಿಯಾಗಿದೆ.

ರಾಮಕೃಷ್ಣ ಎಲೆಕ್ಟ್ರಾನಿಕ್ಸ್‌, ಆರ್‌ಟಿಪಿಎಲ್‌ ಕಂಪನಿ ಮಾಲೀಕರು ಸಾಲದ ಹಣವನ್ನು ತಮ್ಮ ಸ್ವಂತ ಲಾಭಕ್ಕಾಗಿ ಮತ್ತು ಅಕ್ರಮ ಹಣ ವರ್ಗಾವಣೆಗಾಗಿ ಬಳಸಿಕೊಂಡಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಗುರುತಿಸಿದೆ. ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಮತ್ತು ಅಲ್ಲು ಅರವಿಂದ್ ಒಡೆತನದ ಕಂಪನಿಗಳ ನಡುವೆ ಕೆಲವು ಅನುಮಾನಾಸ್ಪದ ಹಣಕಾಸಿನ ವಹಿವಾಟುಗಳು ನಡೆದಿರುವುದು ಕಂಡುಬಂದಿದೆ.

ವಹಿವಾಟುಗಳ ಕುರಿತು ಸ್ಪಷ್ಟೀಕರಣ ಕೋರಿ ಜಾರಿ ನಿರ್ದೇಶನಾಯ ಅರವಿಂದ್‌ ಅವರಿಗೆ ನೋಟಿಸ್ ನೀಡಿದೆ. ಮುಂದಿನ ವಾರ ಮತ್ತೊಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಆದೇಶಿಸಲಾಗಿದೆ. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಾಗಿದೆ.

ಬೆಂಗಳೂರಿನಲ್ಲಿ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಕರ್ನೂಲ್, ಹೈದರಾಬಾದ್ ಮತ್ತು ಗಾಜಿಯಾಬಾದ್ ಪ್ರದೇಶಗಳಲ್ಲಿ ಶೋಧ ನಡೆಸಿದರು. ಸಂಸ್ಥೆಗಳ ನಿರ್ದೇಶಕರು ಮತ್ತು ಪಾಲುದಾರ ವಿ. ರಾಘವೇಂದ್ರ, ವಿ. ರವಿ ಕುಮಾರ್ ಮತ್ತು ಇತರರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.

ಪ್ರಕರಣದ ಆರೋಪಿಗಳಾಗಿರುವ ವಿ. ರಾಘವೇಂದ್ರ ಮತ್ತು ವಿ. ರವಿ ಕುಮಾರ್ ಜೊತೆಗಿನ ಅಲ್ಲು ಅರವಿಂದ್ ಒಡನಾಟ, ಆಸ್ತಿ ಖರೀದಿ ಸಂಬಂಧ ತನಿಖೆ ನಡೆಯುತ್ತಿದೆ. ಸಾಕಷ್ಟು ಪ್ರಶ್ನೆಗಳನ್ನು ಸಿದ್ಧಪಡಿಸಿ ಇಡಿ ಅಧಿಕಾರಿಗಳು ಅಲ್ಲು ಅರವಿಂದ್ ಉತ್ತರವನ್ನು ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಬಳಿಕ ಅಲ್ಲು ಅರವಿಂದ್ ಹೇಳಿದ್ದಾರೆ. 

Share this Story:

Follow Webdunia kannada

ಮುಂದಿನ ಸುದ್ದಿ

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ