Select Your Language

Notifications

webdunia
webdunia
webdunia
webdunia

ಕೃಷ್ಣಮೃಗ ಬೇಟೆ ಪ್ರಕರಣ: ಜ.25ರಂದು ಕೋರ್ಟ್‌ಗೆ ಹಾಜರಾಗಲು ಸಲ್ಲುಗೆ ಸೂಚನೆ

Black buck poaching case
ಜೋಧ್ಪುರ , ಶುಕ್ರವಾರ, 13 ಜನವರಿ 2017 (17:00 IST)
ಕೃಷ್ಣಮೃಗ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿ 25 ರಂದು ಕೋರ್ಟ್‌ಗೆ ಹಾಜರಾಗುವಂತೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್‌ಗೆ ಸೂಚಿಸಿದೆ. 
ನಟಿಯರಾದ ಟಬು, ಸೋನಾಲಿ ಬೇಂದ್ರೆಗೂ ನ್ಯಾಯಾಲಯದಲ್ಲಿ ಹಾಜರಿರುವಂತೆ ಜೋಧ್ಪುರ ನ್ಯಾಯಾಲಯ ನಿರ್ದೇಶನ ನೀಡಿದೆ.
 
1998ರಲ್ಲಿ ಹಮ್ ಸಾಥ್ ಸಾಥ್ ಹೈ ಸಿನಿಮಾ ಶೂಟಿಂಗ್ ನಡೆಯುವಾಗ ಸಲ್ಮಾನ್  ಜೋಧ್ಪುರದ ಬಳಿ ಇರುವ ರಕ್ಷಿತಾರಣ್ಯದಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ್ದರು. ಅವರ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು. ಪರವಾನಿಗೆ ಅವಧಿ ಮುಗಿದ ಬಳಿಕವೂ ಅಕ್ರಮವಾಗಿ ಶಸ್ತ್ರಾಸ್ತ್ರ ಇಟ್ಟುಕೊಂಡ ಆರೋಪ ಸಲ್ಮಾನ್ ಮೇಲಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಟನಿಗೆ ಈಗಾಗಲೇ ಎರಡು ಬಾರಿ ಜೈಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಜು ಕನ್ನಡ ಮೀಡಿಯಂ ಸಿನಿಮಾ ಟೀಸರ್ ( ವಿಡಿಯೋ)