Webdunia - Bharat's app for daily news and videos

Install App

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

Sampriya
ಸೋಮವಾರ, 16 ಜೂನ್ 2025 (20:10 IST)
Photo Credit X
ಬೆಂಗಳೂರು: ತೀರ್ಥಹಳ್ಳಿಯ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಸಂಬಂಧ ಇದೀಗ ಕಾಂತಾರ ಸಿನಿಮಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. 

ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ 1ಗೆ ಒಂದಾದ್ಮೇಲೆ ಒಂದು ಸಂಕಷ್ಟ ಎದುರಾಗುತ್ತಲೇ ಇದೆ.  ಕಾಂತಾರ ಚಾಪ್ಟರ್-1 ಸಿನಿಮಾ ತಂಡ ಕೊನೆ ಹಂತದ ಚಿತ್ರೀಕರಣ ಮಾಡುವ ವೇಳೆ ಮೇಲಿಂದ ಮೇಲೆ ಸಂಕಷ್ಟಗಳು ಎದುರಾಗ್ತಿವೆ.

ಸಿನಿಮಾದ ಮೂವರು ಸಹ ಕಲಾವಿದರು ಸಾವಿನ ನೋವು ಮಾಸುವ ಮುನ್ನವೇ ಮತ್ತೊಂದು ಆಘಾತ ಎದುರಾಗಿದೆ. ಕೂದಲೆಳೆ ಅಂತರದಲ್ಲೇ ಭಾರೀ ಅನಾಹುತವೊಂದು ತಪ್ಪಿದೆ. ತೀರ್ಥಹಳ್ಳಿಯ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ಮೂವತ್ತು ಜನರು ಪ್ರಾಣಾಪಾಯದಿಂದ ಬಚಾವ್ ಆಗಿದ್ದಾರೆ. 
ಜೂನ್‌ 14 ರಂದು ತೀರ್ಥಹಳ್ಳಿಯ ಮಾಸ್ತಿಕಟ್ಟೆಯ ಮಾಣಿ ಜಲಾಶಯದಲ್ಲಿ ದೋಣಿ ಮಗುಚಿದ ಘಟನೆ ಸಂಭವಿಸಿದೆ ಎಂದು ವರದಿ ಆಗಿತ್ತು. ವರದಿಗೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾಧಿಕಾರಿ ಮಾಧ್ಯಮಗಳ ಜೊತೆಯೂ ಸೋಮವಾರ ಮಾತನಾಡಿದ್ದರು.  

ಮಾಣಿ ಜಲಾಶಯದಲ್ಲಿ ನಡೆದ ಘಟನೆಯ ಬಗ್ಗೆ ಸಂಪೂರ್ಣ ವರದಿಯನ್ನು ನೀಡುವಂತೆ ಹೊಸನಗರ ತಹಶೀಲ್ದಾರ್ ಕಚೇರಿಯಿಂದ ಪತ್ರ ಬರೆದಿದ್ದು, ಪತ್ರ ತಲುಪಿದ ಮೂರುದಿನಗಳ ಒಳಗಾಗಿ ಸ್ಪಷ್ಟನೆ ನೀಡುವಂತೆ ಸೂಚಿಸಲಾಗಿದೆ. 

ಇಲ್ಲವಾದಲ್ಲಿ ನಂತರ ಶೂಟಿಂಗ್‌ಗೆ ನೀಡಿರುವ ಅನುಮತಿಯನ್ನ ರದ್ದುಗೊಳಿಸಿ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಡುವುದಿಲ್ಲ ಎಂದು ತಹಶೀಲ್ದಾರ್ ಕಛೇರಿಯಿಂದ ಕಾಂತಾರ ಚಿತ್ರತಂಡಕ್ಕೆ ಖಡಕ್ ಪತ್ರವೊಂದು ರವಾನಿಸಿದೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments