Select Your Language

Notifications

webdunia
webdunia
webdunia
webdunia

ವೈದ್ಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ಧ್ವನಿ ಎತ್ತಿದ ಬಾಲಿವುಡ್ ಸೆಲೆಬ್ರಿಟಿಗಳು

Alia Bhat

Sampriya

‌ಮುಂಬೈ , ಗುರುವಾರ, 15 ಆಗಸ್ಟ್ 2024 (19:46 IST)
Photo Courtesy X
ಮುಂಬೈ: ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಕೊಲೆ, ಅತ್ಯಾಚಾರ ಪ್ರಕರಣದ ವಿರುದ್ಧ ಬಾಲಿವುಡ್‌ ತಾರೆಯರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿ ಫೋಸ್ಟ್ ಹಂಚಿಕೊಂಡಿದ್ದಾರೆ. ಬಾಲಿವುಡ್‌ ನಟಿ ಕರೀನಾ ಕಪೂರ್‌, 12 ವರ್ಷಗಳ ನಂತರ ಮತ್ತೇ ಅದೇ ಕಥೆ, ಅದೇ ಪ್ರತಿಭಟನೆ, ಆದರೆ ನಾವು ಮಾತ್ರ ಬದಲಾವಣೆಗಾಗಿ ಎಂದು ಬರೆದುಕೊಂಡಿದ್ದಾರೆ.

ಘಟನೆಯ ಕುರಿತು ಬೇಸರ ವ್ಯಕ್ತಪಡಿಸಿರುವ ಆಲಿಯಾ ಭಟ್‌, 'ನಿರ್ಭಯಾ ದುರಂತ ಸಂಭವಿಸಿ ಒಂದು ದಶಕ ಕಳೆದಿದೆ. ಮತ್ತೊಂದು ಭೀಕರ ಅತ್ಯಾಚಾರ, ಹೆಣ್ಣಿಗೆ ಎಲ್ಲಿಯೂ ಸುರಕ್ಷತೆಯಿಲ್ಲ ಎಂದು ತೋರಿಸಿಕೊಡುವ ಮತ್ತೊಂದು ದಿನ.  ಆದರೆ ಇನ್ನೂ ಏನೂ ಬದಲಾಗಿಲ್ಲ ಎಂಬುದನ್ನು ನಮಗೆ ನೆನಪಿಸಲು ಮತ್ತೊಂದು ಭಯಾನಕ ದೌರ್ಜನ್ಯ ಎಂದಿದ್ದಾರೆ.

ನಟಿ ಪರಿಣಿತಿ ಚೋಪ್ರಾ ಕೂಡ ಪೋಸ್ಟ್‌ವೊಂದನ್ನು ಶೇರ್‌ ಮಾಡಿಕೊಂಡು, 'ನಿಮಗೇ ಓದಲು ಕಷ್ಟವಾಗುತ್ತಿದೆ ಎಂದರೆ, ಆಕೆಗೆ ಯಾವ ಅನುಭವವಾಗಿರಬಹುದು ಎನ್ನುವುದನ್ನು ಯೋಚಿಸಿ, ಕೃತ್ಯ ಎಸಗಿದಾತನನ್ನು ಗಲ್ಲಿಗೇರಿಸಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ವಿಜಯ್‌ ವರ್ಮಾ, 'ಕೊನೆ ಪಕ್ಷ ನಮ್ಮನ್ನು ಕಾಯುವವರನ್ನಾದರೂ ರಕ್ಷಿಸಿ' ಎಂದು ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್‌ನಲ್ಲಿ ಬಿಗ್‌ ಆಫರ್ ಗಿಟ್ಟಿಸಿಕೊಂಡ ಶ್ರೀಲೀಲಾಗೆ ಹೀರೋ ಯಾರು ಗೊತ್ತಾ