Webdunia - Bharat's app for daily news and videos

Install App

ವೈದ್ಯ ವಿದ್ಯಾರ್ಥಿನಿ ಕೊಲೆ ಖಂಡಿಸಿ ಧ್ವನಿ ಎತ್ತಿದ ಬಾಲಿವುಡ್ ಸೆಲೆಬ್ರಿಟಿಗಳು

Sampriya
ಗುರುವಾರ, 15 ಆಗಸ್ಟ್ 2024 (19:46 IST)
Photo Courtesy X
ಮುಂಬೈ: ಕೋಲ್ಕತ್ತ ವೈದ್ಯ ವಿದ್ಯಾರ್ಥಿನಿ ಕೊಲೆ, ಅತ್ಯಾಚಾರ ಪ್ರಕರಣದ ವಿರುದ್ಧ ಬಾಲಿವುಡ್‌ ತಾರೆಯರು ಆಕ್ರೋಶ ಹೊರಹಾಕಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿ ಫೋಸ್ಟ್ ಹಂಚಿಕೊಂಡಿದ್ದಾರೆ. ಬಾಲಿವುಡ್‌ ನಟಿ ಕರೀನಾ ಕಪೂರ್‌, 12 ವರ್ಷಗಳ ನಂತರ ಮತ್ತೇ ಅದೇ ಕಥೆ, ಅದೇ ಪ್ರತಿಭಟನೆ, ಆದರೆ ನಾವು ಮಾತ್ರ ಬದಲಾವಣೆಗಾಗಿ ಎಂದು ಬರೆದುಕೊಂಡಿದ್ದಾರೆ.

ಘಟನೆಯ ಕುರಿತು ಬೇಸರ ವ್ಯಕ್ತಪಡಿಸಿರುವ ಆಲಿಯಾ ಭಟ್‌, 'ನಿರ್ಭಯಾ ದುರಂತ ಸಂಭವಿಸಿ ಒಂದು ದಶಕ ಕಳೆದಿದೆ. ಮತ್ತೊಂದು ಭೀಕರ ಅತ್ಯಾಚಾರ, ಹೆಣ್ಣಿಗೆ ಎಲ್ಲಿಯೂ ಸುರಕ್ಷತೆಯಿಲ್ಲ ಎಂದು ತೋರಿಸಿಕೊಡುವ ಮತ್ತೊಂದು ದಿನ.  ಆದರೆ ಇನ್ನೂ ಏನೂ ಬದಲಾಗಿಲ್ಲ ಎಂಬುದನ್ನು ನಮಗೆ ನೆನಪಿಸಲು ಮತ್ತೊಂದು ಭಯಾನಕ ದೌರ್ಜನ್ಯ ಎಂದಿದ್ದಾರೆ.

ನಟಿ ಪರಿಣಿತಿ ಚೋಪ್ರಾ ಕೂಡ ಪೋಸ್ಟ್‌ವೊಂದನ್ನು ಶೇರ್‌ ಮಾಡಿಕೊಂಡು, 'ನಿಮಗೇ ಓದಲು ಕಷ್ಟವಾಗುತ್ತಿದೆ ಎಂದರೆ, ಆಕೆಗೆ ಯಾವ ಅನುಭವವಾಗಿರಬಹುದು ಎನ್ನುವುದನ್ನು ಯೋಚಿಸಿ, ಕೃತ್ಯ ಎಸಗಿದಾತನನ್ನು ಗಲ್ಲಿಗೇರಿಸಿ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟ ವಿಜಯ್‌ ವರ್ಮಾ, 'ಕೊನೆ ಪಕ್ಷ ನಮ್ಮನ್ನು ಕಾಯುವವರನ್ನಾದರೂ ರಕ್ಷಿಸಿ' ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

ಮುಂದಿನ ಸುದ್ದಿ
Show comments