Publish Date: Wed, 30 Sep 2020 (11:51 IST)
Updated Date: Wed, 30 Sep 2020 (11:53 IST)
ಚೆನ್ನೈ : ತಮಿಳಿನ ಖ್ಯಾತ ನಟ ಸೂರ್ಯ ಅವರ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಅಪರಿಚಿತನೊಬ್ಬ ಹುಸಿ ಬಾಂಬ್ ಕರೆ ಮಾಡಿದ್ದಾನೆ.
ನಟ ಸೂರ್ಯ ಅವರ ಚೆನ್ನೈನ ಅಲ್ವಾರ್ ಪೇಟೆಯಲ್ಲಿರುವ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಸೋಮವಾರ ಸಂಜೆ ಆಗಂತುಕನೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಬೆದರಿಕೆ ಕರೆ ಮಾಡಿದ್ದಾನೆ. ತಕ್ಷಣ ಪೊಲೀಸರು ಬಾಂಬ್ ನಿಷ್ಕ್ರೀಯ ದಳದೊಂದಿಗೆ ಸ್ಥಳಕ್ಕೆ ಬಂದು ಹುಡುಕಾಟ ನಡೆಸಿದ್ದಾರೆ.
ಆದರೆ ಬಾಂಬ್ ಪತ್ತೆಯಾಗದ ಹಿನ್ನಲೆಯಲ್ಲಿ ಬಂದಿರುವುದು ಹುಸಿ ಕರೆ ಎಂದು ತಿಳಿದು ಪೊಲೀಸರು ಕರೆ ಮಾಡಿದವನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.