Webdunia - Bharat's app for daily news and videos

Install App

ಫೇಸ್‌ಬುಕ್‌ನಲ್ಲೂ ಅಸಮಧಾನ ಹೊರ ಹಾಕಿದ ದರ್ಶನ್

Webdunia
ಸೋಮವಾರ, 6 ಮಾರ್ಚ್ 2017 (08:12 IST)
ನಿನ್ನೆ ಟ್ವಿಟರ್‌ನಲ್ಲಿ ತಮ್ಮ ಮತ್ತು ಸುದೀಪ್ ನಡುವಿನ ಸ್ನೇಹ ಅಂತ್ಯವಾಗಿದೆ ಎಂದು ಟ್ವೀಟ್ ಮಾಡಿದ್ದ ದರ್ಶನ್ ಇಂದು ಫೇಸ್‌ಬುಕ್‌ನಲ್ಲಿ ಕೂಡ ಅಸಮಧಾನವನ್ನು ಹೊರಹಾಕಿದ್ದಾರೆ.

ನಾನು  ಹಾಗೂ ಸುದೀಪ್ ಇನ್ನು ಸ್ನೇಹಿತರಲ್ಲ. ಕೇವಲ ಕನ್ನಡ ಚಿತ್ರರಂಗದ ನಟರಷ್ಟೇ. ನಮ್ಮ ನಡುವಿನ ಸ್ನೇಹದ ಕುರಿತು ಯಾವುದೇ ಊಹಾಪೋಹಗಳು ಇಂದಿನಿಂದ ಕೊನೆಗೊಳ್ಳಲಿ, ಎಂದು ದರ್ಶನ್ ಟ್ವೀಟ್ 
 
ಮಾಡಿದ ಬಳಿಕ ಅವರ ಖಾತೆ ಹ್ಯಾಕ್ ಆಗಿದೆ ಎಂದು ಕೆಲ ವಾಹಿನಿಗಳು ಸುದ್ದಿ ಪ್ರಕಟಿಸಿದ್ದವು. ಆದರೆ ತಮ್ಮ ಖಾತೆ ಹ್ಯಾಕ್ ಆಗಿಲ್ಲ ಎಂದು ಫೇಸ್‌ಬುಕ್ ಮೂಲಕ ದರ್ಶನ್ ಸ್ಪಷ್ಟನೆ ನೀಡಿದ್ದಾರೆ.
 
ಅವರು ಪ್ರಕಟಿಸಿರುವ ಫೇಸ್‌ಬುಕ್ ಸ್ಟೇಟಸ್ ಸರಣಿ ಹೀಗಿದೆ:
 
*ಕೆಲ ಚಾನೆಲ್ಸ್ ಹೇಳುವಂತೆ ಯಾರೇನು ಹ್ಯಾಕ್ ಮಾಡಿಲ್ಲ. ಇದು ನನ್ನ ಖಾತೆ, ಎಲ್ಲವು ನಾನು ಹೇಳಿದ ಮಾತುಗಳೇ. ನನ್ನ ಗಮನಕ್ಕೆ ಬಂದ ಸಂಗತಿಗಳನ್ನು ತುಂಬಾ ಆಲೋಚಿಸಿಯೇ ನಾನು ಹೇಳಲು ಬಯಸುವ ವೇದಿಕೆ. 
- ನಿಮ್ಮ ದಾಸ ದರ್ಶನ್
 
*ಇದೇ ಮೊದಲ ಬಾರಿಗೆ ಈ ವೀಡಿಯೋ ( ಸುದೀಪ್ ಮಾತಿನ ವಿಡಿಯೋ ಪ್ರಕಟಿಸಿ) ನೋಡಿದಾಗ ನನ್ನ ಮನಸ್ಸಿಗೆ ನೋವಾದಂತೂ ನಿಜ. ಈ ಹೇಳಿಕೆ ನೀಡಿದ್ದೇಕೆ!? ಸುದೀಪ್ ರವರು ಕ್ಲಾರಿಟಿ ನೀಡಲಿ .
 
*ಈ ವೀಡಿಯೋಲಿ ಹೇಳಿರುವ ಪ್ರಕಾರ ಅವಕಾಶ ಸಿಗಲು ಸುದೀಪ್ ತಾವೇ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಮಾಡದಿರುವ ಕೆಲಸವನ್ನು ಮಾಡಿದ್ದೀನಿ ಎಂದು ಹೇಳುವುದು ಎಷ್ಟು ಸರಿ?
 
*ನನಗೆ 'ಮೆಜೆಸ್ಟಿಕ್' ಸಿಗಲು ಕಾರಣ - ರಾಮಮೂರ್ತಿ, ಪಿ ಎನ್ ಸತ್ಯ ಮತ್ತು ರಮೇಶ್
 
*Me & Sudeep aren't Friends Anymore. We are just Actors working for Kannada Industry. No more speculations please. That's the end of it‬.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

ಮುಂದಿನ ಸುದ್ದಿ
Show comments