Webdunia - Bharat's app for daily news and videos

Install App

ಬೃಂದಾವನ ನಟ ವರುಣ್ ಆರಾಧ್ಯ ವಿರುದ್ಧ ಠಾಣೆ ಮೆಟ್ಟಿಲೇರಿದ ಹಳೇ ಪ್ರೇಯಸಿ

Sampriya
ಬುಧವಾರ, 11 ಸೆಪ್ಟಂಬರ್ 2024 (17:01 IST)
Photo Courtesy X
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರೇಯಸಿಯ ಖಾಸಗಿ ವಿಡಿಯೋ ಹಾಗೂ ಫೋಟೋ ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ ಆರೋಪದಡಿಯಲ್ಲಿ ನಟ ವರುಣ್ ಆರಾಧ್ಯ ಮೇಲೆ ಪ್ರಕರಣ ದಾಖಲಾಗಿದೆ.

ಬೃಂದಾವನ ಸೀರಿಯಲ್ ನಟ ವರುಣ್ ಆರಾಧ್ಯ ಮೇಲೆ ಮಾಜಿ ಪ್ರೇಯಸಿ ಠಾಣೆ ಮೆಟ್ಟಿಲೇರಿದ್ದು ಅದರಂತೆ ನಟನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ವರುಣ್ ಆರಾಧ್ಯ ಅವರು ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಿದ್ದ ಬೃಂದಾವನ ಸೀರಿಯಲ್‌ನಲ್ಲಿ ನಟಿಸಿದ್ದರು. ಅದಲ್ಲದೆ ಇವರು ತಮ್ಮ ರೀಲ್ಸ್ ಮೂಲಕ ತುಂಬಾನೇ ಜನಮನ್ನಣೆ ಗಳಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ವರುಣ್ ಆರಾಧ್ಯ ಜತೆ ಪ್ರೀತಿಯಲ್ಲಿ ಬಿದ್ದು, ದೂರವಾಗಿದ್ದ ಯುವತಿ ಇದೀಗ ಠಾಣೆ ಮೆಟ್ಟಿಲೇರಿದ್ದಾರೆ. ರೀಲ್ಸ್ ಮೂಲಕ ಈ ಜೋಡಿ ಕರ್ನಾಟಕದಾದ್ಯಂತ ಗುರುತಿಸಿಕೊಂಡಿದ್ದರು. ಈಚೆಗೆ ಈ ಜೋಡಿ ಬ್ರೇಕಪ್ ಆಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದರು. ತಮ್ಮ ಮುದ್ದಾದ ರೀಲ್ಸ್ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿದ್ದ ಈ ಜೋಡಿಯ ಬ್ರೇಕಪ್ ಸುದ್ದಿ ಚರ್ಚೆಯಾಗಿತ್ತು.

ಬಸವೇಶ್ವನಗರ ಸೆನ್ ಪೊಲೀಸ್ ಠಾಣೆಯಲ್ಲಿ ಯುವತಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.  ಖಾಸಗಿ ವಿಡಿಯೋ ಹಾಗೂ ಪೋಟೋಗಳನ್ನು ಇಟ್ಟುಕೊಂಡು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ವರುಣ್ ಆರಾಧ್ಯ ಬ್ಲ್ಯಾಕ್‌ಮೇಲ್ ಮಾಡಿದ್ದಾನೆ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments