Darshan: ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ವಿರುದ್ಧ ದೂರು: ಫಾರಂಹೌಸ್ ಮೇಲೆ ರೇಡ್

Krishnaveni K
ಶುಕ್ರವಾರ, 23 ಮೇ 2025 (11:40 IST)
ಮೈಸೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಓಡಾಡಿಕೊಂಡಿರುವ ನಟ ದರ್ಶನ್ ಈಗ ಮತ್ತೆ ಸಹಜ ಜೀವನಕ್ಕೆ ಮರಳುತ್ತಾರೆನ್ನುವಾಗ ಸಂಕಷ್ಟವೊಂದು ಎದುರಾಗಿದೆ. ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ  ವಿರುದ್ಧ ದೂರು ದಾಖಲಾಗಿದ್ದು ಫಾರಂಹೌಸ್ ಮೇಲೆ ರೇಡ್ ಮಾಡಲಾಗಿದೆ.

ನಟ ದರ್ಶನ್ ಮಾಲಿಕತ್ವದ ಟಿ ನರಸೀಪುರದಲ್ಲಿರುವ ಫಾರಂ ಹೌಸ್ ನಲ್ಲಿ ಅಪರೂಪದ ತಳಿಯ ಬಾತುಕೋಳಿಯೊಂದನ್ನು ಸಾಕಿದ್ದಾರೆ. ಇದನ್ನು ಖಾಸಗಿಯಾಗಿ ಸಾಕುವುದು ಅಪರಾಧವಾಗಿದೆ. ಆದರೆ ಯೂ ಟ್ಯೂಬ್ ಸಂದರ್ಶನವೊಂದರ ವೇಳೆ ದರ್ಶನ್ ಈ ಬಾತುಕೋಳಿ ಬಗ್ಗೆ ವಿವರಣೆ ನೀಡಿರುವುದು ಅರಣ್ಯ ಇಲಾಖೆ ಗಮನಕ್ಕೆ ಬಂದಿದೆ.

ಈ ಹಿನ್ನಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಫಾರಂ ಹೌಸ್ ಮೇಲೆ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಈ ಬಾತುಕೋಳಿಗಳನ್ನು ನಮ್ಮ ಸ್ನೇಹಿತರೊಬ್ಬರು ನೀಡಿದ್ದರು ಎಂದು ದರ್ಶನ್ ಹೇಳಿದ್ದಾರೆ ಎನ್ನಲಾಗಿದೆ. ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಖಾಸಗಿ ದೂರು ಸಲ್ಲಿಸಿದ್ದಾರೆ.

ಹೀಗಾಗಿ ಈಗ ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಜಾಗ ವಿಜಯಲಕ್ಷ್ಮಿ ಮಾಲಿಕತ್ವದಲ್ಲಿರುವ ಕಾರಣ ಅವರ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments