Webdunia - Bharat's app for daily news and videos

Install App

ಚಂದನ್ ಶೆಟ್ಟಿ ಆಯ್ತು ಈಗ ಅರ್ಜುನ್ ಜನ್ಯ ಮೇಲೆ ವಕ್ರದೃಷ್ಟಿ ಹರಿಸಿದ ಸಿಸಿಬಿ ಪೊಲೀಸರು

Webdunia
ಬುಧವಾರ, 29 ಆಗಸ್ಟ್ 2018 (06:56 IST)
ಬೆಂಗಳೂರು : ಈಗಾಗಲೇ ಬಿಗ್ ಬಾಸ್ ವಿನ್ನರ್ ಚಂದನ್ ಶೆಟ್ಟಿ ಅವರ  ‘ಅಂತ್ಯ’ ಸಿನಿಮಾದಲ್ಲಿನ‌ ಹಾಡೊಂದು ಮಾದಕ ವಸ್ತುಗಳ ಬಗ್ಗೆ ಪ್ರಚೋದನೆ ನೀಡುವಂತಿರುವ ಕಾರಣ ಸಿಸಿಬಿ ಪೊಲೀಸರು ಚಂದನ್ ಶೆಟ್ಟಿ ಅವರಿಗೆ ಸಮನ್ಸ್ ನೀಡಿದ್ದು, ಈ ಬಗ್ಗೆ ಈಗಾಗಲೇ ಚಂದನ್  ಕ್ಷಮೆ ಕೇಳಿದ್ದಾರೆ. ಅದೇರೀತಿ ಇದೀಗ ಕನ್ನಡದ ಮತ್ತೊಬ್ಬ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಮೇಲೆ ಸಿಸಿಬಿ ಪೊಲೀಸರು ವಕ್ರದೃಷ್ಟಿ ಹರಿಸಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಸ್ಯಾಂಡಲ್ ವುಡ್ ನಟ ಶರಣ್ ಅಭಿನಯದ ‘ರ್ಯಾಂಬೋ – 2’ ಚಿತ್ರದಲ್ಲಿನ ‘ಧಮ್ ಮಾರೋ ಧಮ್’ ಹಾಡು ಹಿಟ್ ಆಗಿತ್ತು. ಈ ಹಾಡಿಗೆ ನಟಿ ಐಂದ್ರಿತಾ ರೈ ಸ್ಟೆಪ್ ಹಾಕಿದ್ರು . ಈ ಹಾಡಿಗೆ ಕನ್ನಡದ ಖ್ಯಾತ ಮ್ಯೂಸಿಕ್ ಡೈರೆಕ್ಟರ್ ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮಾಡಿದ್ದು, ಇದೀಗ ಈ ಹಾಡು ಮಾದಕ ವಸ್ತು ಸೇವನೆಗೆ ಪ್ರಚೋದನೆ ನೀಡುತ್ತೆ ಎಂಬ ನಿಟ್ಟಿನಲ್ಲಿ ಅರ್ಜುನ್ ಜನ್ಯ ಅವರಿಗೂ  ನೊಟೀಸ್ ನೀಡಲು ಸಿಸಿಬಿ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.


ಮೊದಲ ಹಂತವಾಗಿ ಅವರನ್ನು ಕರೆಯಿಸಿ ಬುದ್ಧಿವಾದ ಹೇಳಿ ಕಳುಹಿಸುತ್ತೇವೆ.‌ ನಂತರ ಇದೇ ಪರಿಸ್ಥಿತಿ‌ ಮರುಕಳಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ .


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ