ಹುಟ್ಟುಹಬ್ಬದ ದಿನ ದರ್ಶನ್ ಮಾತನ್ನು ಚಾಚೂ ತಪ್ಪದೆ ಪಾಲಿಸಿದ ಅಭಿಮಾನಿಗಳು

Webdunia
ಶನಿವಾರ, 16 ಫೆಬ್ರವರಿ 2019 (10:14 IST)
ಬೆಂಗಳೂರು: ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜನ್ಮದಿನದ ಸಂಭ್ರಮ. ಆದರೆ ರೆಬಲ್ ಸ್ಟಾರ್ ಅಂಬರೀಶ್ ನಿಧನದ ಗೌರವಾರ್ಥ ದರ್ಶನ್ ಈ ಬಾರಿ ಕೇಕ್ ಕಟ್ ಮಾಡಿ ಸಂಭ್ರಮಿಸದಿರಲು ನಿರ್ಧರಿಸಿದ್ದಾರೆ.

ಅಷ್ಟೇ ಅಲ್ಲ, ಅಭಿಮಾನಿಗಳೂ ಮನೆ ಮುಂದೆ ಕೇಕ್ ತಂದು ಸಂಭ್ರಮಾಚರಣೆ ಮಾಡಬೇಡಿ ಎಂದು ದರ್ಶನ್ ಮೊದಲೇ ಮನವಿ ಮಾಡಿದ್ದರು. ದರ್ಶನ್ ಕರೆಗೆ ಓಗೊಟ್ಟ ಅಭಿಮಾನಿಗಳು ಕೇಕ್ ಕಟ್ ಮಾಡಲ್ಲ ಆದರೆ ನಿಮ್ಮ ಆಸೆಯಂತೆ ಅನಾಥಾಶ್ರಮಗಳಿಗೆ ಅನ್ನದಾನ ಮಾಡಿ ಸಾಮಾಜಿಕ ಕೆಲಸ ಮಾಡುತ್ತೇವೆ ಎಂದಿದ್ದರು.

ಅದರಂತೆ ಇಂದು ಅಭಿಮಾನಿಗಳು ದರ್ಶನ್ ಮನೆ ಮುಂದೆ ಜಮಾಯಿಸದೇ ಅನಾಥಾಶ್ರಮಗಳಿಗೆ ಅನ್ನದಾನ ಮಾಡುತ್ತಿದ್ದಾರೆ. ದರ್ಶನ್ ಕೋರಿಕೆಯಂತೆ ಸಿದ್ಧಗಂಗಾ ಮಠಕ್ಕೆ 12 ಮೂಟೆ ಅಕ್ಕಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಇನ್ನು, ತಮಗೆ ಶುಭಕೋರಲು ಮನೆಗೆ ಬರುವ ಅಭಿಮಾನಿಗಳಿಗೆ ದರ್ಶನ್ ಊಟ ಹಾಕಿ ಕಳುಹಿಸುವ ವ್ಯವಸ್ಥೆಯನ್ನೂ ಮಾಡಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬದಂದು ಅಭಿಮಾನಿಗಳಿಂದ ಸಮಾಜಕ್ಕೆ ಒಳ್ಳೆಯದಾಗುವಂತೆ ನೋಡಿಕೊಂಡಿದ್ದಾರೆ ಡಿ ಬಾಸ್.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಹೊಸ ತಮಿಳು ಸಿನಿಮಾಗೆ ದಿನದಲ್ಲಿ ಐದು ಶೋ ಪ್ರದರ್ಶಿಸಲು ಸಿಎಂ ವಿಜಯ್ ಅನುಮತಿ

ಸಲ್ಮಾನ್ ಖಾನ್ ತೀರಾ ಖಾಸಗಿ ಕ್ಷಣ ಸೋಷಿಯಲ್ ಮೀಡಿಯಾದಲ್ಲಿ ಲೀಕ್: ತೀರಾ ಅತಿಯಾಯ್ತು ಎಂದ ಪಬ್ಲಿಕ್ Video

Video ಕಾಂತಾರ ವಿವಾದ: ಚಾಮುಂಡಿ ತಾಯಿ ಸನ್ನಿಧಿಗೆ ಬಂದು ತಲೆಬಾಗಿ ಕ್ಷಮೆ ಕೇಳಿದ ರಣವೀರ್ ಸಿಂಗ್

ಮುಂದಿನ ಸುದ್ದಿ
Show comments