Webdunia - Bharat's app for daily news and videos

Install App

ರಾಜಕೀಯ ಎಂಟ್ರಿ ವದಂತಿ ಬಗ್ಗೆ ಖಡಕ್ ಉತ್ತರ ಕೊಟ್ಟ ಚಾಲೆಂಜಿಂಗ್ ಸ್ಟಾರ್

Webdunia
ಮಂಗಳವಾರ, 12 ಸೆಪ್ಟಂಬರ್ 2017 (10:10 IST)
ನಾನು ರಾಜಕೀಯಕ್ಕೆ ಬರುತ್ತೇನೆಂದು ಹರಡಿರುವ ಸುದ್ಧಿ ಶುದ್ಧ ಸುಳ್ಳು ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ರಾಜಕೀಯದಲ್ಲಿ ಸಿಕ್ಕ ಸಿಕ್ಕವರಿಗೆ ಸಲಾಂ ಹೊಡೆಯಬೇಕು. ಸಲಾಂ ಹೊಡೆಯುವ ಸಂಸ್ಕೃತಿ ನನ್ನದಲ್ಲ. ಹೀಗಾಗಿ, ಸಲಾಂ ಸಂಸ್ಕೃತಿ ಇರುವ ರಾಜಕೀಯ ನನಗೆ ಸರಿ ಹೊಂದುವುದಿಲ್ಲ. ಈ ಬಗ್ಗೆ ಹರಡಿರುವ ಸುದ್ದಿಗಳೆಲ್ಲ ಸುಳ್ಳು ಎಂದು ದರ್ಶನ್ ಸ್ಪಷ್ಟಪಡಿಸಿದ್ದಾರೆ. ಗುಪ್ತವಾಗಿ ರಾಜಕೀಯಕ್ಕೆ ಸೇರಬೇಕಾದ ಅನಿವಾರ್ಯತೆಯೂ ನನಗೆ ಇಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಇತ್ತೀಚೆಗೆ ರಿಯಲ್ ಸ್ಟಾರ್ ಉಪೇಂದ್ರ ವಿಶಿಷ್ಟವಾಗಿ ತಮ್ಮದೇ ಶೈಲಿ ಪ್ರಜಾಕಾರಣಕ್ಕೆ ಎಂಟ್ರಿ ಕೊಟ್ಟಿದ್ದರು. ಪ್ರಜಾಕಾರಣದ ಸಭೆಗಳನ್ನ ಸಹ ಉಪೇಂದ್ರ ನಡೆಸುತ್ತಿದ್ದಾರೆ. ಇದರ ಜೊತೆಗೆ ಕಿಚ್ಚ ಸುದೀಪ್ ಹೆಸರು ಕೂಡ ರಾಜಕೀಯದ ವಿಷಯವಾಗಿ ಬಂದು ಹೋಗಿತ್ತು. ಅದೇ ರೀತಿ ದರ್ಶನ್ ಕೂಡ ರಾಜಕೀಯಕ್ಕೆ ಬರುತ್ತಾರೆ. ರಾಷ್ಟ್ರೀಯ ಪಕ್ಷವೊಂದರ ಮೂಲಕ ಮೈಸೂರಿನಿಂದ ಸ್ಪರ್ಧಿಸುತ್ತಾರೆ ಎಂಬ ವದಂತೆ ಹಬ್ಬಿತ್ತು. ಈ ಹಿಂದೆ ಅಂಬರೀಷ್ ಅವರ ಪರ ಪ್ರಚಾರ ಬಂದಿದ್ದ ಸಂದರ್ಭದಲ್ಲೂ ದರ್ಶನ್ ರಾಜಕೀಯ ಪ್ರವೇಶದ ಊಹಾಪೋಹಗಳು ಹಬ್ಬಿದ್ದವು. ಇದೀಗ, ಸ್ವತಃ ದರ್ಶನ್ ಅವರೇ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾನು ನಿಮ್ಮೊಂದಿಗೆ ಫ್ಲರ್ಟ್‌ ಮಾಡ್ಬೇಕು: ನಟಿಗೆ ಸಂದೇಶ ಕಳುಹಿಸಿ ಸಿಕ್ಕಿಬಿದ್ದ ಕಿರುತೆರೆ ನಟ

Madenooru Manu: ರೇಪ್‌ಕೇಸ್‌ನಲ್ಲಿ ಜೈಲು ಸೇರಿದ ನಟ ಮಡೆನೂರು ನಟ

Madenur Manu: ಮಡೆನೂರು ಮನು ಹೇಳಿದ್ದು ನಿಜವೇ ಆದರೆ.. ರೊಚ್ಚಿಗೆದ್ದ ಡಿಬಾಸ್ ಫ್ಯಾನ್ಸ್

Jaggesh: ಶಿವರಾಜ್ ಕುಮಾರ್ ಸಾವು ಬಯಸಿದವರಿಗೆ ಕೇಡುಗಾಲ ಬರಲಿದೆ: ನಟ ಜಗ್ಗೇಶ್ ಶಾಪ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಮುಂದಿನ ಸುದ್ದಿ
Show comments