ಅಂಬಾರಿ ಅರ್ಜುನನ ಸಮಾಧಿಗಾಗಿ ಮನವಿ ಮಾಡಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

Krishnaveni K
ಶುಕ್ರವಾರ, 3 ಮೇ 2024 (10:03 IST)
ಬೆಂಗಳೂರು: ಅಂಬಾರಿ ಅರ್ಜುನನ ಸಮಾಧಿ ನಿರ್ಮಾಣಕ್ಕಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಸಂದೇಶ ಬರೆದುಕೊಂಡಿದ್ದಾರೆ.

ಕಳೆದ ವರ್ಷ ಅಂಬಾರಿ ಹೊರುತ್ತಿದ್ದ ಆನೆ ಅರ್ಜುನ ಕಾಡಾನೆಗಳ ಜೊತೆಗಿನ ಸಂಘರ್ಷದಲ್ಲಿ ಮೃತಪಟ್ಟಿದ್ದ. ಅವನ ಸಾವಿಗೆ ಕರುನಾಡೇ ಮರುಗಿತ್ತು. ಬಳಿಕ ಸಕಲ ರಾಜಮರ್ಯಾದೆಯಿಂದ ಅರ್ಜುನನ ಅಂತ್ಯಸಂಸ್ಕಾರ ಮಾಡಲಾಗಿತ್ತು. ಇದೀಗ ಅವನ ಸಮಾಧಿ ಸ್ಥಳ ಅನಾಥವಾಗಿದೆ.

ಆದಷ್ಟು ಬೇಗ ಅರ್ಜುನನ ಸಮಾಧಿಗೆ ಗೌರವ ಸಿಗುವಂತಾಗಬೇಕು ಎಂದು ದರ್ಶನ್ ಪ್ರಾಣಿಗಳ ಮೇಲಿನ ತಮ್ಮ ಪ್ರೀತಿ ಹೊರಹಾಕಿದ್ದಾರೆ. ‘

ದಸರಾ ಸಡಗರದ ವೇಳೆ ಬಹಳಷ್ಟು ಬಾರಿ ಅಂಬಾರಿ ಹೊತ್ತು ತನ್ನ ಗಜಗಾಂಭೀರ್ಯಕ್ಕೆ ಹೆಸರುವಾಸಿಯಾಗಿದ್ದ ಅರ್ಜುನ ಕಳೆದ ವರ್ಷ ನಡೆದ ಕಾಡಾನೆ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದು ತಿಳಿದೇ ಇದೆ. ಆತನ ಸಮಾಧಿಗೆ ಯಾರು ದಿಕ್ಕು-ದೆಸೆ ಇಲ್ಲದಂತೆ ಭಾಸವಾಗುತ್ತಿದೆ.ಆತನಿಗೆ ಸಲ್ಲಬೇಕಾದ ಗೌರವ ಆದಷ್ಟು ಬೇಗ ದೊರೆಯಲಿ. ಇನ್ನೇನು ಮಳೆಗಾಲ ಶುರುವಾಗುವ ಮುನ್ನ ಇದಕ್ಕೊಂದು ಒಳ್ಳೆ ವ್ಯವಸ್ಥೆಯಾಗಲಿ ಎಂಬ ಕೋರಿಕೆ ನಮ್ಮದು' ಎಂದಿದ್ದಾರೆ.

 
ಅವರ ಈ ಪ್ರಾಣಿ ಮೇಲಿನ ಕಳಕಳಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ದರ್ಶನ್ ಗೆ ಪ್ರಾಣಿಗಳೆಂದರೆ ಎಲ್ಲಿಲ್ಲದ ಪ್ರೀತಿ. ಮೈಸೂರು ಮೃಗಾಲಯದಲ್ಲಿ ಕೆಲವು ಪ್ರಾಣಿಗಳನ್ನು ದತ್ತು ತೆಗೆದುಕೊಂಡಿದ್ದಾರೆ. ತಮ್ಮ ಫಾರ್ಮ್ ಹೌಸ್ ನಲ್ಲೂ ಕುದುರೆ, ಹಸು ಸೇರದಿಂತೆ ಪ್ರಾಣಿ-ಪಕ್ಷಿಗಳನ್ನು ಸಾಕುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments