Webdunia - Bharat's app for daily news and videos

Install App

ಶ್ರೀ ಮುರಳಿ ಭರಾಟೆ ಟೀಸರ್ ಬಿಡುಗಡೆ ಮಾಡಿದ ಡಿ ಬಾಸ್ ದರ್ಶನ್ ಹೇಳಿದ್ದು ಕೇಳಿದರೆ ಶಾಕ್ ಆಗುತ್ತೀರಿ!

Webdunia
ಬುಧವಾರ, 19 ಡಿಸೆಂಬರ್ 2018 (09:55 IST)
ಬೆಂಗಳೂರು: ನಮ್ಮ ಚಿತ್ರರಂಗದಲ್ಲಿ ಒಗ್ಗಟ್ಟಿಲ್ಲ, ಹೀರೋಗಳು ತಮ್ಮದೇ ಗುಂಪು ಕಟ್ಟಿಕೊಂಡಿದ್ದಾರೆ ಎಂದೆಲ್ಲಾ ಗಾಸಿಪ್ ಹರಡುವವರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಶ್ರೀ ಮುರಳಿ ಅಭಿನಯದ ಭರಾಟೆ ಸಿನಿಮಾ ಟೀಸರ್ ಲಾಂಚ್ ಕಾರ್ಯಕ್ರಮದಲ್ಲಿ ಉತ್ತರ ಕೊಟ್ಟಿದ್ದಾರೆ.


ಮುರಳಿ ಬರ್ತ್ ಡೇ ದಿನವೇ ಟೀಸರ್ ಲಾಂಚ್ ಮಾಡಿದ ದರ್ಶನ್ ‘ಉಗ್ರಂ ಸಿನಿಮಾ ನೋಡಿ ಮುರಳಿಗೆ ಫೋನ್ ಮಾಡಿದ್ದೆ. ಅಂತಹ ಒಂದು ಸಿನಿಮಾ ನನಗೂ ಮಾಡುವ ಆಸೆಯಿತ್ತು. ಅದೊಂದು ಅದ್ಭುತ ಸಿನಿಮಾ’ ಎಂದು ಹೊಗಳಿದರು.

ಇದೇ ಸಂದರ್ಭದಲ್ಲಿ ದರ್ಶನ್ ಮುರಳಿ ಅಭಿನಯದ ಇನ್ನೊಂದು ಚಿತ್ರ ‘ಮದಗಜ’ದ ಫಸ್ಟ್ ಲುಕ್ ಕೂಡಾ ಬಿಡುಗಡೆ ಮಾಡಿದ್ದರು. ಈ ಟೈಟಲ್ ಮೊದಲು ದರ್ಶನ್ ಗೆ ನಿಗದಿಯಾಗಿತ್ತು. ಆದರೆ ಮುರಳಿಗಾಗಿ ದರ್ಶನ್ ಟೈಟಲ್ ಬಿಟ್ಟುಕೊಟ್ಟಿದ್ದರು.

ಈ ಬಗ್ಗೆ ಮಾತನಾಡಿದ ದರ್ಶನ್ ‘ಯಾರು ಸಿನಿಮಾ ಮಾಡಿದರೇನು? ಚೆನ್ನಾಗಿ ಮಾಡಬೇಕು ಅಷ್ಟೇ. ಆ ಟೈಟಲ್ ನಲ್ಲಿ ಯಾರು ಸಿನಿಮಾ ಮಾಡಿದರೂ ನನಗೆ ಬೇಸರವಿಲ್ಲ. ಒಟ್ನಲ್ಲಿ ನಮ್ಮ ಚಿತ್ರರಂಗ ಚೆನ್ನಾಗಿದ್ದರೆ ಸಾಕು’ ಎಂದು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಡಿ ಬಾಸ್ ಮಾತು ಕೇಳಿ ಅಲ್ಲಿ ನೆರೆದಿದ್ದವರು ಶಿಳ್ಳೆ ಹೊಡೆದು ಖುಷಿ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments