Webdunia - Bharat's app for daily news and videos

Install App

ಚಂದನ್, ಕವಿತಾ ಪ್ರೀತಿಯಲ್ಲಿ ಬೀಳಲು ಇವರೇ ಕಾರಣವಂತೆ!

Webdunia
ಶುಕ್ರವಾರ, 2 ಏಪ್ರಿಲ್ 2021 (09:32 IST)
ಬೆಂಗಳೂರು: ಕಿರುತೆರೆಯ ಮೋಸ್ಟ್ ವಾಂಟೆಡ್ ಜೋಡಿ ಚಂದನ್ ಕುಮಾರ್-ಕವಿತಾ ಗೌಡ ನಿನ್ನೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದಾದ ಬಳಿಕ ಇಬ್ಬರೂ ತಮ್ಮಿಬ್ಬರ ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ಈ ಜೋಡಿ ಕಳೆದ ಕೆಲವು ದಿನಗಳಿಂದಲೂ ಡೇಟಿಂಗ್ ಮಾಡುತ್ತಿತ್ತು. ಇದಕ್ಕೆ ಸಾಕ್ಷಿಯೆಂಬಂತೆ ಪರಸ್ಪರರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಜೊತೆಯಾಗಿರುವ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಆಗೆಲ್ಲಾ ಅಭಿಮಾನಿಗಳು ನೀವು ರಿಯಲ್ ಲೈಫ್ ನಲ್ಲೂ ಒಂದಾಗಿ. ನಿಮ್ಮಿಬ್ಬರದು ಸೂಪರ್ ಜೋಡಿ ಎಂದು ಹಾರೈಸುತ್ತಲೇ ಇದ್ದರು.

ಇದೀಗ ನಿಶ್ಚಿತಾರ್ಥದ ಬಳಿಕ ತಮ್ಮಿಬ್ಬರ ಪ್ರೀತಿಯ ಬಗ್ಗೆ ಮಾತನಾಡಿರುವ ಚಂದನ್, ನಾವಿಬ್ಬರೂ ಪ್ರೀತಿಯಲ್ಲಿ ಬೀಳಲು ನೀವೆಲ್ಲರೂ ಪದೇ ಪದೇ ಹೇಳುತ್ತಿದ್ದ ಮಾತುಗಳೇ ಕಾರಣ ಎಂದು ಹೇಳಿಕೊಂಡಿದ್ದಾರೆ. ನೀವೆಲ್ಲರೂ ನಮ್ಮ ಮೇಲಿಟ್ಟ ಪ್ರೀತಿಯೇ ನಾವಿಬ್ಬರೂ ಪ್ರೀತಿಸುವಂತೆ ಮಾಡಿದ್ದು. ಎಲ್ಲರಿಗೂ ಧನ್ಯವಾದಗಳು ಎಂದು ಚಂದನ್ ಹೇಳಿಕೊಂಡಿದ್ದಾರೆ. ಅಲ್ಲಿಗೆ ಬೆಸ್ಟ್ ಫ್ರೆಂಡ್ಸ್ ಆಗಿದ್ದ ಕವಿತಾರನ್ನೇ ತಮ್ಮ ಜೀವನದ ಸಂಗಾತಿಯಾಗಿ ಚಂದನ್ ಆರಿಸಿಕೊಂಡಿದ್ದು, ಅವರ ಅಭಿಮಾನಿಗಳಿಗೆ ಭರ್ಜರಿ ಖುಷಿಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ದರ್ಶನ್ ಸರ್ ಜೊತೆ ನಾನಿದ್ದೇನೆ ಎಂದ ಧ್ರುವ ಸರ್ಜಾ: ಕೆಡಿ ನೋಡಲಿ ಅಂತಾನಾ ಎಂದ ಡಿಬಾಸ್ ಫ್ಯಾನ್ಸ್

ಪ್ರಥಮ್ ನಡೆದುಕೊಂಡ ರೀತಿ ಸರಿಯಲ್ಲ, ನಾನು ದರ್ಶನ್ ಪರ ನಿಲ್ಲುತ್ತೇನೆ: ನಟ ಧ್ರುವ ಸರ್ಜಾ

₹1000 ಕೋಟಿ ಸಾಲ ಕೊಡುವುದಾಗಿ ₹5ಕೋಟಿ ವಂಚನೆ: ನಟ ಎಸ್‌ ಶ್ರೀನಿವಾಸನ್‌ ಅರೆಸ್ಟ್‌

ಮುಂದಿನ ಸುದ್ದಿ
Show comments