ವಿಚ್ಛೇಧನದ ಬಳಿಕವೂ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಚಂದನ್-ನಿವೇದಿತಾ ಗೌಡ

Sampriya
ಶುಕ್ರವಾರ, 30 ಆಗಸ್ಟ್ 2024 (19:38 IST)
Photo Courtesy X
ಬೆಂಗಳೂರು: ಡಿವೋರ್ಸ್ ವಿಚಾರವಾಗಿ ಈಚೆಗೆ ಸುದ್ದಿಯಾಗಿದ್ದ ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇದೀಗ ಅಭಿಮಾನಿಗಳಿಗೆ ಗುಡ್‌ನ್ಯೂಸ್ ನೀಡಿದ್ದಾರೆ.

ದಾಂಪತ್ಯದಲ್ಲಿ ಬಿರುಕುಕಂಡ ಬಳಿಕ ಇಬ್ಬರು ಡಿವೋರ್ಸ್ ಪಡೆದು ದೂರವಾಗಿದ್ದರೆ. ಈ ಸುದ್ದಿ ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತು. ಇದರ ಬೆನ್ನಲ್ಲೇ ಇಬ್ಬರು ಒಟ್ಟಾಗಿ ಪ್ರೆಸ್‌ಮೀಟ್ ಕರೆದು ವಿಚ್ಚೇಧನದ ಬಗ್ಗೆ ತಮ್ಮ ಅಭಿಪ್ರಾಯವನ್ನು ಹೇಳಿಕೊಂಡಿದ್ದರು.

ಇದೀಗ ಇದೆಲ್ಲದರಿಂದ ಹೊರಬಂದಿರುವ ಇವರು ತಮ್ಮ ಕೆರಿಯರ್ ಬಗ್ಗೆ ಚಿಂತಿಸಿದ್ದಾರೆ. ಅದರಂತೆ ಇದೀಗ ಇವರಿಬ್ಬರು ಒಂದೇ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.  ಶ್ರೀ ಚೌಡೇಶ್ವರಿ ಸಿನಿ ಕಂಬೈನ್ಸ್‌ನಲ್ಲಿ ತಯಾರಾದ ಸಿನಿಮಾಗೆ ಪುನೀತ್ ಶ್ರೀನಿವಾಸ ಆ್ಯಕ್ಷನ್ ಕಟ್ ಹೇಳಿದ್ದಾರೆ.

ಸಿನಿಮಾದ ಪೋಸ್ಟರ್ ರಿಲೀಸ್ ಆಗಿದ್ದು, ಇದನ್ನು ನಿವೇದಿತಾ ಗೌಡ ಅವರು ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಈ ಸಿನಿಮಾಗೆ ಈ ಹಿಂದೆ ಕ್ಯಾಂಡಿಕ್ರಶ್ ಎಂದು ಟೈಟಲ್ ಇಡಲಾಗಿತ್ತು. ಇದೀಗ ಮುದ್ದು ರಾಕ್ಷಸಿ ಎಂದು ಹೆಸರಿಡಲಾಗಿದೆ. ಈ ಸಿನಿಮಾ ಡಿವೋರ್ಸ್‌ಗೂ ಮುನ್ನಾವೇ ಸೆಟ್ ಏರಿದ್ದು, ಡಿವೋರ್ಸ್ ಬಳಿಕವೂ ಒಟ್ಟಿಗೆ ಇವರು ಅಭಿನಯಿಸಿದ್ದರು. ಸದ್ಯ ಸಿನಿಮಾದ ಪ್ರಚಾರದಲ್ಲೂ ತೊಡಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments