Select Your Language

Notifications

webdunia
webdunia
webdunia
webdunia

ಮಾಸ್ತಿಗುಡಿ ದುರಂತ: 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ಮಾಸ್ತಿಗುಡಿ ದುರಂತ: 6 ಮಂದಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
ರಾಮನಗರ , ಗುರುವಾರ, 27 ಏಪ್ರಿಲ್ 2017 (15:33 IST)
ಮಾಸ್ತಿಗುಡಿ ಚಿತ್ರದ  ಚಿತ್ರೀಕರಣದ ವೇಳೆ ನಡೆದಿದ್ದ ದುರಂತ ಪ್ರಕರಣಕ್ಕೆ ಸಂಬಂದಿಸಿದಂತೆ ರಾಮನಗರ ಜಿಲ್ಲೆಯ ಮಾಗಡಿ ಕೋರ್ಟ್`ಗೆ ಪೊಲೀಸರು 400 ಪುಟಗಳ ಆರೋಪ ಪಟ್ಟಿ ಸಲ್ಲಿಸಲಾಗಿದೆ.  

ನಿರ್ಮಾಪಕ ಸುಂದರ್ ಪಿ ಗೌಡ, ನಿರ್ದೇಶಕ ನಾಗಶೇಖರ್, ಸಹ ನಿರ್ದೇಶಕ ಸಿದ್ದು, ಸಾಹಸ ನಿರ್ದೇಶಕ ರವಿವರ್ಮಾ, ಯೂನಿಟ್ ಮ್ಯಾನೇಜರ್ ಪ್ರಕಾಶ್ ಬಿರಾದಾರ್ ಸೇರಿ 6 ಮಂದಿ ವಿರುದ್ದ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಚಾರ್ಜ್ ಶೀಟ್`ನಲ್ಲಿ 70 ಸಾಕ್ಷ್ಯಗಳನ್ನ ಉಲ್ಲೇಖಿಸಲಾಗಿದೆ. ಇನ್ಸ್`ಪೆಕ್ಟರ್ ಅನಿಲ್ ಕುಮಾರ್ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ನವೆಂಬರ್ 7ರಂದು ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಶೂಟಿಂಗ್ ವೇಳೆ ಹೆಲಿಕಾಪ್ಟರ್`ನಿಂದ ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ಧುಮುಕಿದ್ದ ಖಳ ನಟರಾದ ಉದಯ್, ಅನಿಲ್ ಮತ್ತೆ ಮೇಲೆ ಬಂದಿರಲಿಲ್ಲ. ನೀರಿನಲ್ಲಿ ಮುಳುಗಿ ಇಬ್ಬರೂ ಅಸುನೀಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ತಾಲೂಕಿನ ತಿಪ್ಪಗೊಂಡನಹಳ್ಳಿ ಡ್ಯಾಂ ಎಇಇ ಅನುಸೂಯ ತಾವರೆಕೆ ಪೊಲೀಸ್ ಟಾಣೆಗೆ ದೂರು ನೀಡಿದ್ದರು. ಆರೋಪಿಗಳನ್ನ ಬಂಧಿಸಿ ಜಾಮೀನು ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ, 6 ತಿಂಗಳ ಬಳಿಕ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಾಲಿವುಡ್ ಹಿರಿಯ ನಟ ವಿನೋದ್ ಖನ್ನಾ ಇನ್ನಿಲ್ಲ