ಸಿನಿಮಾ ಬರಗಾಲ ಎದುರಿಸುತ್ತಿರುವ ಸ್ಯಾಂಡಲ್ ವುಡ್ ಗೆ ಓಯಸಿಸ್ ನಂತೆ ಬರ್ತಿದ್ದಾನೆ Chef ಚಿದಂಬರ

Krishnaveni K
ಸೋಮವಾರ, 3 ಜೂನ್ 2024 (10:18 IST)
ಬೆಂಗಳೂರು: ಅನಿರುದ್ಧ್ ಜತ್ಕಾರ್ ನಾಯಕರಾಗಿರುವ Chef ಚಿದಂಬರ ಸಿನಿಮಾ ಟ್ರೈಲರ್ ಬಿಡುಗಡೆಯಾಗಿದ್ದು ಸಿನಿಮಾ ಬರಗಾಲ ಎದುರಿಸುತ್ತಿರುವ ಸ್ಯಾಂಡಲ್ ವುಡ್ ಓಯಸಿಸ್ ನಂತೆ ಈ ಸಿನಿಮಾ ಬರಲಿದೆ.
 

ಇತ್ತೀಚೆಗಿನ ದಿನಗಳಲ್ಲಿ ಸ್ಟಾರ್ ನಟರ ಸಿನಿಮಾಗಳೇ ಬಿಡುಗಡೆಯಾಗುತ್ತಿಲ್ಲ ಎಂಬ ಕೊರಗಿದೆ. ಇದರಿಂದಾಗಿ ಥಿಯೇಟರ್ ಗಳೂ ಸಂಕಷ್ಟಕ್ಕೆ ಸಿಲುಕಿವೆ. ಇದರ ನಡುವೆ ಅನಿರುದ್ಧ್ ನಾಯಕರಾಗಿರುವ Chef ಚಿದಂಬರ ಎನ್ನುವ ಕಾಮಿಡಿ ಪ್ಲಸ್ ಥ್ರಿಲ್ಲರ್ ಕತೆಯಿರುವ ಸಿನಿಮಾ ತೆರೆಗೆ ಬರುತ್ತಿದೆ.

ಈ ಸಿನಿಮಾದ ಟ್ರೈಲರ್ ನ್ನು ಇತ್ತೀಚೆಗೆ ನಟ ರಮೇಶ್ ಅರವಿಂದ್ ಬಿಡುಗಡೆ ಮಾಡಿದ್ದರು. ಟ್ರೈಲರ್ ಬಿಡುಗಡೆಯಾದ ಎರಡೇ ದಿನದಲ್ಲಿ ಲಕ್ಷ ವ್ಯೂ ದಾಟಿ ಈಗ ಯೂ ಟ್ಯೂಬ್ ನಲ್ಲಿ ಟ್ರೆಂಡಿಂಗ್ ಇದೆ. ಟ್ರೈಲರ್ ನೋಡಿದರೆ ಸಿನಿಮಾ ಮಾಸ್ ಸಿನಿಮಾದ ಎಲ್ಲಾ ಮಸಾಲೆ ಉಣಬಡಿಸುವುದು ಪಕ್ಕಾ ಎನಿಸುತ್ತಿದೆ.

ಜೂನ್ 14 ಕ್ಕೆ ಥಿಯೇಟರ್ ನಲ್ಲಿ ರಾಜ್ಯಾದ್ಯಂತ ಸಿನಿಮಾ ಬಿಡುಗಡೆಯಾಗುತ್ತಿದೆ. ಅನಿರುದ್ಧ್ ಗೆ ಜೋಡಿಯಾಗಿ ರಾಚೆಲ್ ಡೇವಿಡ್, ನಿಧಿ ಸುಬ್ಬಯ್ಯ ನಟಿಸಿದ್ದಾರೆ. ಇವರ ಜೊತೆಗೆ ಶರತ್ ಲೋಹಿತಾಶ್ವ, ಶಿವಮಣಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಎಂ ಆನಂದ್ ರಾಜ್ ನಿರ್ದೇಶನ ಮಾಡಿದ್ದು ರೂಪ ಡಿಎನ್ ನಿರ್ಮಾಣ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments