Webdunia - Bharat's app for daily news and videos

Install App

Chef ಚಿದಂಬರನ ಅಡುಗೆ ಸಿದ್ಧ: ಒಗ್ಗರಣೆಯೊಂದೇ ಬಾಕಿ

Webdunia
ಬುಧವಾರ, 11 ಅಕ್ಟೋಬರ್ 2023 (09:00 IST)
ಬೆಂಗಳೂರು: Chef ಚಿದಂಬರನ ನಳಪಾಕ ರೆಡಿಯಾಗಿದೆ. ಆದರೆ ಜನರಿಗೆ ಉಣಬಡಿಸುವ ಮೊದಲು ಒಗ್ಗರಣೆ ಹಾಕಬೇಕಿದೆ. ಇದಕ್ಕೆ ಒಂದಷ್ಟು ಸಮಯ ಹಿಡಿಯಲಿದೆ.

ಅನಿರುದ್ಧ್ ಜತ್ಕಾರ್ ನಾಯಕರಾಗಿರುವ ‘ರಾಘು’ ಸಿನಿಮಾ ಖ್ಯಾತಿಯ ನಿರ್ದೇಶಕ ಆನಂದ್ ರಾಜ್ ನಿರ್ದೇಶಿಸಿರುವ Chef ಚಿದಂಬಂರ ಸಿನಿಮಾ ಶೂಟಿಂಗ್ ಮುಕ್ತಾಯವಾಗಿರುವುದಾಗಿ ಚಿತ್ರತಂಡ ಘೋಷಿಸಿದೆ. ಕೇವಲ 29 ದಿನಗಳಲ್ಲಿ ಶೂಟಿಂಗ್ ಮುಕ್ತಾಯವಾಗಿದೆ. ಮುಂದೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಬಾಕಿಯಿವೆ. ಮುಂದಿನ ವರ್ಷದ ಆರಂಭದಲ್ಲಿ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿದೆ.

 
ಈ ಸಿನಿಮಾ ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿದ್ದು, ಇದಕ್ಕೆ ಮೊದಲು ನಿರ್ದೇಶಕ ಆನಂದ್ ರಾಜ್ ಇಂತಹದ್ದೇ ಸಿನಿಮಾ ಮಾಡಿ ಗೆದ್ದಿದ್ದರು. ಇದೀಗ ಕೊಂಚ ವಿಭಿನ್ನ ಶೈಲಿಯ ಸಸ್ಪೆನ್ಸ್ ಥ್ರಿಲ್ಲರ್ ಕತೆಯೊಂದಿಗೆ ಜನರ ಮುಂದೆ ಬರುತ್ತಿದ್ದಾರೆ. ಸಿನಿಮಾದಲ್ಲಿ ಅನಿರುದ್ಧ್ ಜತ್ಕಾರ್ ಗೆ ಜೋಡಿಯಾಗಿ ರಾಚೆಲ್ ಡೇವಿಡ್ ಮತ್ತು ನಿಧಿ ಸುಬ್ಬಯ್ಯ ಅಭಿನಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments