Webdunia - Bharat's app for daily news and videos

Install App

ಮಾವ ಅರ್ಜುನ್ ಸರ್ಜಾ ನಂತರ ಅಳಿಯ ಚಿರಂಜೀವಿ ಸರ್ಜಾ ಕೂಡ ಮೀಟೂ ಆರೋಪಕ್ಕೆ ಗುರಿಯಾದ್ರಾ?

Webdunia
ಸೋಮವಾರ, 29 ಅಕ್ಟೋಬರ್ 2018 (06:33 IST)
ಬೆಂಗಳೂರು : ಇತ್ತೀಚೆಗೆ ನಟಿ ಶೃತಿ ಹರಿಹರನ್ ಬಹುಭಾಷಾ ನಟ ಅರ್ಜುನ್ ಸರ್ಜಾ ಮೇಲೆ ಮೀಟೂ ಆರೋಪ ಮಾಡಿ ಸ್ಯಾಂಡಲ್ ವುಡ್ ನಲ್ಲಿ ಬಾರೀ ಸಂಚಲನ ಮೂಡಿಸಿದ್ದರು. ಅದರ  ಬೆನ್ನಲೇ ಇದೀಗ  ಅರ್ಜುನ್ ಸರ್ಜಾ ಅವರ  ಅಳಿಯ ನಟ ಚಿರಂಜೀವಿ ಸರ್ಜಾ ಮೇಲೆ ಮೀಟೂ ಆರೋಪ ಕೇಳಿ ಬರುತ್ತಿದೆ.


2017 ರಲ್ಲಿ ತೆಲುಗು ಚಿತ್ರ ‘ಕ್ಷಣಂ’ ರಿಮೇಕ್ ವೇಳೆ ಈ ಘಟನೆ ನಡೆದಿದ್ದು, ಕೆ.ಎಂ.ಚೈತನ್ಯ ನಿರ್ದೇಶನದ ಹೆಸರಿಡದ ಚಿತ್ರಕ್ಕಾಗಿ ಶೃತಿ ಹರಿಹರನ್ ಮತ್ತು ಸಂಗೀತಾ ಭಟ್ ಇಬ್ಬರನ್ನು ನಾಯಕಿರನ್ನಾಗಿ ಆಯ್ಕೆ ಮಾಡಲಾಗಿತ್ತು. ಈ ವೇಳೆ ತಮಗಾದ ಅನುಭವವನ್ನು ಫೇಸ್ ಬುಕ್ ನಲ್ಲಿ ತಿಳಿಸಿದ ನಟಿ ಸಂಗೀತಾ ಅವರು , “2017ರಲ್ಲಿ ರೀಮೇಕ್ ಚಿತ್ರವೊಂದನ್ನು ಒಪ್ಪಿಕೊಂಡಿದ್ದೆ.


ಆದರೆ ಆ ಸಿನಿಮಾದ ನಟ ಕನ್ಯತ್ವವನ್ನು ಪ್ರಶ್ನೆ ಮಾಡಿದ್ದರು. ಆದ್ದರಿಂದ ನಾನು ಸಿನಿಮಾದಿಂದ ಹೊರಬಂದೆ “ ಎಂದು ಹೇಳಿದ್ದರು.
ಆದರೆ ಇದಕ್ಕೆ ಕಮೆಂಟ್ ಮಾಡಿದ ನಟಿಯ ಅಭಿಮಾನಿಗಳು,” ಆ ಸಿನಿಮಾದ ನಟ ಚಿರಂಜೀವಿ ಆಗಿದ್ದರು. ಆದ್ದರಿಂದ ಅವರು ಈ ರೀತಿ ಪ್ರಶ್ನೆ ಮಾಡಿದ್ದಾರಾ?” ಎಂಬ ಪ್ರಶ್ನೆಯನ್ನು ಕೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಂಗೀತಾ ಭಟ್,’’ ನಾನು ಹಾಕಿರುವ ಪೋಸ್ಟ್ ನಲ್ಲಿ ಯಾವ ನಟ, ನಿರ್ದೇಶಕ, ನಿರ್ಮಾಪಕರ ಮೇಲೂ ಮೀಟೂ ಆರೋಪ ಮಾಡಿಲ್ಲ. ನನ್ನ ಅನುಭವನ್ನು ಹಂಚಿಕೊಂಡಿದ್ದೇನೆ ಅಷ್ಟೆ. ನಾನು ಮಾಡಿರುವ ಪೋಸ್ಟ್ ಇಟ್ಟುಕೊಂಡು ಕೆಲವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಆ ರೀತಿ ಮಾಡಬೇಡಿ. ನಮ್ಮ ಪಾಡಿಗೆ ನಮ್ಮನ್ನು ಬಿಡಿ” ಎಂದು ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ವಿಜಯ್ ದೇವರಕೊಂಡ ಅದೆಲ್ಲವೂ ನನಗಿಷ್ಟ ಎಂದು ನಾಚಿಕೊಂಡ ರಶ್ಮಿಕಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಮುಂದಿನ ಸುದ್ದಿ
Show comments