Webdunia - Bharat's app for daily news and videos

Install App

ಶ್ರೀಕಾಳಹಸ್ತೀಶ್ವರ ದರ್ಶನ ಪಡೆದ ಚಿರಂಜೀವಿ

Webdunia
ಸೋಮವಾರ, 23 ಜನವರಿ 2017 (12:27 IST)
ಮೆಗಾ ಸ್ಟಾರ್ ಚಿರಂಜೀವಿ ರೀ ಎಂಟ್ರಿ ಕೊಟ್ಟಿರುವ ಖೈದಿ ನಂಬರ್ 150 ಬಾಕ್ಸ್ ಆಫೀಸಲ್ಲಿ ಭಾರಿ ಯಶಸ್ಸು ಸಾಧಿಸಿದ್ದು ಚಿರಂಜೀವಿ ಖುಷಿಯಾಗಿದ್ದಾರೆ.  ಈ ಹಿನ್ನೆಲೆಯಲ್ಲಿ ಕೆಲವು ದೇವಸ್ಥಾನಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಪುನಸ್ಕಾರಗಳ ಮೊರೆ ಹೋಗಿದ್ದಾರೆ ಚಿರು. 
 
ಶ್ರೀಕಾಳಹಸ್ತೀಶ್ವರ ದೇವಾಲಯಕ್ಕೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ಶಾಂತಿ ಮಹಾಯಜ್ಞದಲ್ಲಿ ಕುಟುಂಬ ಸದಸ್ಯರ ಜತೆ ಪಾಲ್ಗೊಂಡಿದ್ದಾರೆ. ಶ್ರೀಕಾಳ ಹಸ್ತೀಶ್ವರನ ದರ್ಶನ ಮಾಡಿಕೊಂಡು ವಿಶೇಷ ಪೂಜೆಗಳನ್ನು ಮಾಡಿಸಿದರು. ಇಲ್ಲಿಗೆ ಚಿರು ಬಂದಿರುವುದನ್ನು ತಿಳಿದುಕೊಂಡ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಇಲ್ಲಿಗೆ ಆಗಮಿಸಿದ್ದಾರೆ.  
 
ದೇವಾಲಯದಲ್ಲಿ ಒಂದಷ್ಟು ನೂಗು ನುಗ್ಗಲು ನಡೆದಿದೆ. ಈಗ ಚಿರು ದೃಷ್ಟಿ ಸಂಪೂರ್ಣ ಸಿನಿಮಾಗಳ ಮೇಲೆಯೇ ಬಿದ್ದಿದೆ. 150ನೇ ಚಿತ್ರದ ಯಶಸ್ಸು ಅವರಲ್ಲಿ ಸಾಕಷ್ಟು ಉತ್ಸಾಹ, ಧೈರ್ಯ ತುಂಬಿದೆ. ಈ ಹಿನ್ನೆಲೆಯಲ್ಲಿ 151ನೇ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಚಿರು. ಇದೇ ಮಾರ್ಚ್‌ನಲ್ಲಿ ಚಿತ್ರ ಸೆಟ್ಟೇರಲಿದೆ ಎನ್ನುತ್ತಿವೆ ಮೂಲಗಳು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ವಿಶ್ವ ಪ್ಯಾರಾ ಅಥ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನ ಬ್ರಾಂಡ್ ಅಂಬಾಸಿಡರ್‌ ಆಗಿ ಕಂಗನಾ ರನೌತ್

ಕಿಯಾರ ಅಡ್ವಾಣಿಗಾಗಿ ದೊಡ್ಡ ನಿರ್ಧಾರ ತೆಗೆದುಕೊಂಡ ರಾಕಿಂಗ್ ಸ್ಟಾರ್ ಯಶ್

ಚಿತ್ರರಂಗದವರಿಗೆ ಗೌರವ ಕೊಡಿ ಎಂದ ಕಿಚ್ಚ ಸುದೀಪ್ ಗೆ ಡಿಕೆ ಶಿವಕುಮಾರ್ ಹೇಳಿದ್ದೇನು

ದೇವರೇ ಬಂದು ಹೇಳಿದ್ರೂ ಕ್ಷಮೆ ಕೇಳಲ್ಲ ಎಂದ ರಚಿತಾ ರಾಮ್: ನಾವಿದ್ದೀವಿ ಎಂದ ಡಿ ಬಾಸ್ ಫ್ಯಾನ್ಸ್

ಮುಂದಿನ ಸುದ್ದಿ
Show comments