Publish Date: Mon, 08 Jun 2020 (08:30 IST)
Updated Date: Mon, 08 Jun 2020 (08:31 IST)
ಬೆಂಗಳೂರು: ಚಿರಂಜೀವಿ ಸರ್ಜಾ ಅಕಾಲಿಕವಾಗಿ ಸಾವನ್ನಪ್ಪಲು ಜಾತಕ ದೋಷವೇ ಕಾರಣವಾಯಿತೇ? ನವರಸನಾಯಕ ಜಗ್ಗೇಶ್ ಅವರ ಜಾತಕದಲ್ಲಿದ್ದ ದೋಷದ ಬಗ್ಗೆ ಹೇಳಿದ್ದಾರೆ.
ಚಿರು ಸರ್ಜಾ ಮದುವೆ ಸಂದರ್ಭದಲ್ಲಿ ಮೇಘನಾ ಮತ್ತು ಚಿರು ಜಾತಕವನ್ನು ತಮ್ಮ ಪರಿಚಯದ ಜ್ಯೋತಿಷಿಗಳ ಬಳಿ ತೋರಿಸಲು ಸುಂದರ್ ರಾಜ್ ದಂಪತಿಗಳ ಜತೆ ಜಗ್ಗೇಶ್ ಹೋಗಿದ್ದರಂತೆ. ಆ ಜ್ಯೋತಿಷಿಗಳು ಇವರ ಜಾತಕದಲ್ಲಿ ಅಷ್ಟಮ ಕುಜ ದೋಷವಿದೆ. ಅದಕ್ಕೆ ಕೆಲವು ಪೂಜೆ ಮುಖ್ಯ. ಅದನ್ನು ಮಾಡಿ ಮುಂದುವರಿಯಿರಿ ಎಂದಿದ್ದರಂತೆ.
ಆದರೆ ಈ ಪೂಜೆ ಅವರು ಮಾಡಿದ್ದಾರೋ ಇಲ್ಲವೋ ಎಂಬ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದಿದ್ದಾರೆ ಜಗ್ಗೇಶ್. ಜ್ಯೋತಿಷ್ಯದಲ್ಲಿ ನಂಬಿಕೆಯುಳ್ಳವರು ಕುಜ ದೋಷವಿದ್ದರೆ ಪತಿ-ಪತ್ನಿ ಜತೆಯಾಗಿ ಬಾಳುವ ಯೋಗವಿಲ್ಲ ಎಂದು ನಂಬುತ್ತಾರೆ. ಹೀಗಾಗಿ ಈ ದೋಷವೇ ಚಿರು ಸಾವಿಗೆ ಕಾರಣವಾಯಿತೇ ಎಂದು ಅನುಮಾನ ಮೂಡಿದೆ.