Webdunia - Bharat's app for daily news and videos

Install App

ಸಾಹಸಸಿಂಹ ಡಾ. ವಿಷ್ಣುವರ್ಧನ್ ಗೂ ಕರ್ನಾಟಕ ರತ್ನ: ಭರವಸೆ ನೀಡಿದ ಸಿಎಂ

Webdunia
ಸೋಮವಾರ, 30 ಜನವರಿ 2023 (09:30 IST)
Photo Courtesy: Twitter
ಬೆಂಗಳೂರು: ಸಹಸ್ರಾರು ಅಭಿಮಾನಿಗಳ ಎದೆಯಲ್ಲಿ ಅಜರಾಮರಾಗಿರುವ ಸಾಹಸಸಿಂಹ ಡಾ. ವಿಷ್ಣುವರ್ಧನ್ ಗೆ ಕರ್ನಾಟಕ ರತ್ನ ನೀಡಬೇಕು ಎಂಬ ಅಭಿಮಾನಿಗಳ ಒತ್ತಾಸೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಸಿಎಂ ನಿನ್ನೆ ಮೈಸೂರಿನ ಹಾಲಾಳು ಗ್ರಾಮದಲ್ಲಿ ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ ಮಾಡಿದ್ದಾರೆ. ಇದು ಅಭಿಮಾನಿಗಳ ಬಹಳ ವರ್ಷಗಳ ಬೇಡಿಕೆಯಾಗಿತ್ತು. ಕೊನೆಗೂ ಅದೀಗ ಈಡೇರಿದೆ. ಅಭಿಮಾನಿಗಳ ಪ್ರೀತಿಯ ದಾದನ ಭವ್ಯವಾದ ಸ್ಮಾರಕ ತಲೆಎತ್ತಿ ನಿಂತಿದೆ.

ಬೇರೆ ನಟರಿಗೆ ಕೊಡುವ ಗೌರವವನ್ನು ವಿಷ್ಣುವರ್ಧನ್ ಅವರಿಗೆ ಯಾಕೆ ಕೊಡುತ್ತಿಲ್ಲ ಎಂದು ಕಿಡಿ ಕಾರಿದ್ದ ವಿಷ್ಣು ಅಪ್ಪಟ ಅಭಿಮಾನಿ ವೀರಕಪುತ್ರ ಶ್ರೀನಿವಾಸ್, ಅವರಿಗೂ ಕರ್ನಾಟಕ ರತ್ನ ನೀಡಲು ಒತ್ತಾಯಿಸಿದ್ದರು. ಇದೀಗ ಅಭಿಮಾನಿಗಳ ಒತ್ತಾಸೆಗೆ ಸ್ಪಂದಿಸಿರುವ ಸಿಎಂ, ವಿಷ್ಣುವರ್ಧನ್ ಗೂ ಕರ್ನಾಟಕ ರತ್ನ ನೀಡುವ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments