Webdunia - Bharat's app for daily news and videos

Install App

ನಟ ಕಿಶೋರ್‌ಗೆ ಹೊಸ ಜವಾಬ್ದಾರಿ ವಹಿಸಿದ ಸಿಎಂ ಸಿದ್ದರಾಮಯ್ಯ ಸರ್ಕಾರ

Sampriya
ಗುರುವಾರ, 9 ಜನವರಿ 2025 (17:16 IST)
Photo Courtesy X
ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿಯಾಗಿ ನಟ ಕಿಶೋರ್‌ ಅವರನ್ನು ಕರ್ನಾಟಕ ಸರ್ಕಾರ ನೇಮಕ ಮಾಡಿದೆ.

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್‌ 1ರಿಂದ 8ರ ವರೆಗೆ ನಡೆಯಲಿದೆ.

ಇನ್ನೂ ಈಚೆಗೆ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಚಲನಚಿತ್ರೋತ್ಸವ ಆಯೋಜನೆ ಕುರಿತು ಸಭೆ ನಡೆಯಿತು.

ಈ ವರ್ಷದ ಚಲನಚಿತ್ರೋತ್ಸವದ ಥೀಮ್‌ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್‌ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.  2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ.

9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ.

ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು, 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.

ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Renukaswamy Case: ಎರಡನೇ ಭಾರೀ ಜೈಲು ಸೇರಿದ ದರ್ಶನ್‌

ಏನೂ ಆಗಲ್ಲ ಬಾಸ್, ನಿಮ್ಮೊಂದಿಗೆ ನಾವಿದ್ದೇವೆ: ಡಿಬಾಸ್ ಗೆ ಫ್ಯಾನ್ಸ್ ಫುಲ್ ಸಪೋರ್ಟ್

ಫೇವರೇಟ್‌ ಕಲರ್‌ನ ಬಟ್ಟೆ, ಲಿಪ್‌ಸ್ಟಿಕ್‌, ಕ್ಲಿಪ್‌ ಹಾಕಿ ಗ್ಲಾಮರ್‌ ಲುಕ್‌ನಲ್ಲೇ ಹೊರಟ ಪವಿತ್ರಾ

ಜೀಪ್ ನಲ್ಲೂ ಬರಲಿಲ್ಲ, ಪತ್ನಿ ಬಳಿಯೂ ಬರಲಿಲ್ಲ, ದರ್ಶನ್ ಪ್ಲ್ಯಾನ್ ಏನು

ಜೈಲು ಸೇರುತ್ತಿದ್ದರೂ ಒಂಚೂರು ಬದಲಾಗದ ಪವಿತ್ರಾ ಗೌಡ ವರಸೆ, ಸುಬ್ಬಿ ಗರಂ ಆಗಿದ್ಯಾಕೆ

ಮುಂದಿನ ಸುದ್ದಿ
Show comments