Select Your Language

Notifications

webdunia
webdunia
webdunia
webdunia

ಸರ್ಜರಿ ಆಗಿ ಬಂದ ಶಿವಣ್ಣನ ಹೆಗಲ ಮೇಲೆ ಕೈಯಿಟ್ಟು ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

Shiva Rajkumar-Siddaramaiah

Krishnaveni K

ಬೆಂಗಳೂರು , ಸೋಮವಾರ, 27 ಜನವರಿ 2025 (14:50 IST)
ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮುಗಿಸಿ ಬಂದ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಆತ್ಮೀಯವಾಗಿ ಮಾತನಾಡಿಸಿ ಧೈರ್ಯ ತುಂಬಿದ್ದಾರೆ.

ಶಿವರಾಜ್ ಕುಮಾರ್ ನಿನ್ನೆಯಷ್ಟೇ ಅಮೆರಿಕಾದಿಂದ ಭಾರತಕ್ಕೆ ಬಂದಿಳಿದಿದ್ದರು. ಮೂತ್ರಕೋಶದ ಕ್ಯಾನ್ಸರ್ ಗೊಳಗಾಗಿದ್ದ ಅವರಿಗೆ ಡಿಸೆಂಬರ್ ಅಂತ್ಯಕ್ಕೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಹಾಸ್ಪಿಟಲ್ ನಲ್ಲಿ ಸರ್ಜರಿಯಾಗಿತ್ತು.

ಸರ್ಜರಿ ಬಳಿಕ ಒಂದು ತಿಂಗಳು ಶಿವಣ್ಣ ಅಮೆರಿಕಾದಲ್ಲಿಯೇ ಇದ್ದರು. ನಿನ್ನೆಯಷ್ಟೇ ಅವರು ಬೆಂಗಳೂರಿಗೆ ಬಂದಿಳಿದಿದ್ದರು. ಬೆಂಗಳೂರು ವಿಮಾನ ನಿಲ್ದಾಣದಿಂದಲೇ ಅವರನ್ನು ಅಭಿಮಾನಿಗಳು, ಸಿನಿ ರಂಗದ ಆತ್ಮೀಯರು ಭರ್ಜರಿಯಾಗಿ ಸ್ವಾಗತಿಸಿ ಮನೆಗೆ ಕರೆದೊಯ್ದಿದ್ದರು.

ಇಂದು ಶಿವಣ್ಣ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅವರಿಗೆ ಆರೋಗ್ಯ ಚೇತರಿಕೆಯಾಗಿ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದೆ. ಅವರು ಈಗ ಚೇತರಿಸಿಕೊಂಡಿದ್ದಾರೆ. ಮುಂದಿನ ತಿಂಗಳಿನಿಂದ ಶೂಟಿಂಗ್ ಗೆ ಹೋಗ್ತಾರಂತೆ ಎಂದು ಹೇಳಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

Bigg Boss 11: ₹50 ಲಕ್ಷ ಬಹುಮಾನದಲ್ಲಿ ವಿನ್ನರ್‌ ಹನುಮಂತಗೆ ಸಿಗುವ ಹಣ ಇಷ್ಟೆನಾ