Webdunia - Bharat's app for daily news and videos

Install App

ಸರ್ಜರಿ ಆಗಿ ಬಂದ ಶಿವಣ್ಣನ ಹೆಗಲ ಮೇಲೆ ಕೈಯಿಟ್ಟು ಧೈರ್ಯ ತುಂಬಿದ ಸಿಎಂ ಸಿದ್ದರಾಮಯ್ಯ

Krishnaveni K
ಸೋಮವಾರ, 27 ಜನವರಿ 2025 (14:50 IST)
ಬೆಂಗಳೂರು: ಅಮೆರಿಕಾದಲ್ಲಿ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮುಗಿಸಿ ಬಂದ ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಇಂದು ಆತ್ಮೀಯವಾಗಿ ಮಾತನಾಡಿಸಿ ಧೈರ್ಯ ತುಂಬಿದ್ದಾರೆ.

ಶಿವರಾಜ್ ಕುಮಾರ್ ನಿನ್ನೆಯಷ್ಟೇ ಅಮೆರಿಕಾದಿಂದ ಭಾರತಕ್ಕೆ ಬಂದಿಳಿದಿದ್ದರು. ಮೂತ್ರಕೋಶದ ಕ್ಯಾನ್ಸರ್ ಗೊಳಗಾಗಿದ್ದ ಅವರಿಗೆ ಡಿಸೆಂಬರ್ ಅಂತ್ಯಕ್ಕೆ ಅಮೆರಿಕಾದ ಮಿಯಾಮಿ ಕ್ಯಾನ್ಸರ್ ಹಾಸ್ಪಿಟಲ್ ನಲ್ಲಿ ಸರ್ಜರಿಯಾಗಿತ್ತು.

ಸರ್ಜರಿ ಬಳಿಕ ಒಂದು ತಿಂಗಳು ಶಿವಣ್ಣ ಅಮೆರಿಕಾದಲ್ಲಿಯೇ ಇದ್ದರು. ನಿನ್ನೆಯಷ್ಟೇ ಅವರು ಬೆಂಗಳೂರಿಗೆ ಬಂದಿಳಿದಿದ್ದರು. ಬೆಂಗಳೂರು ವಿಮಾನ ನಿಲ್ದಾಣದಿಂದಲೇ ಅವರನ್ನು ಅಭಿಮಾನಿಗಳು, ಸಿನಿ ರಂಗದ ಆತ್ಮೀಯರು ಭರ್ಜರಿಯಾಗಿ ಸ್ವಾಗತಿಸಿ ಮನೆಗೆ ಕರೆದೊಯ್ದಿದ್ದರು.

ಇಂದು ಶಿವಣ್ಣ ನಿವಾಸಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಅವರಿಗೆ ಆರೋಗ್ಯ ಚೇತರಿಕೆಯಾಗಿ ಮುಂದಿನ ಜೀವನ ಸುಖಕರವಾಗಿರಲಿ ಎಂದು ಹಾರೈಸಿದೆ. ಅವರು ಈಗ ಚೇತರಿಸಿಕೊಂಡಿದ್ದಾರೆ. ಮುಂದಿನ ತಿಂಗಳಿನಿಂದ ಶೂಟಿಂಗ್ ಗೆ ಹೋಗ್ತಾರಂತೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shruti Haasan, ಚೆನ್ನೈಗೆ ಸೋಲಾಗುತ್ತಿದ್ದ ಹಾಗೇ ಬಿಕ್ಕಿ ಬಿಕ್ಕಿ ಅತ್ತ ಸ್ಟಾರ್ ನಟಿ, Video Viral

Ranya Rao: ಗೋಲ್ಡ್ ರಾಣಿ ರನ್ಯಾ ರಾವ್ ಪರಿಸ್ಥಿತಿ ಏನಾಗಿದೆ ನೋಡಿ: ಶಾಕಿಂಗ್ ಸುದ್ದಿ

ಎರಡೇ ವಾರದ ಹಿಂದೆ ಪಹಲ್ಗಾಮ್ ಸ್ಥಿತಿ ಹೀಗಿತ್ತು : ಭಯಾನಕ ಸತ್ಯ ಬಿಚ್ಚಿಟ್ಟ ಗಣೇಶ್ ಕಾರಂತ್

Pahalgam Terror Attack:ಪಾಕ್‌ನ ನಟ-ನಟಿಯರಿಗೂ ತಟ್ಟಿದ ಬಿಸಿ, ಫವಾದ್ ಖಾನ್ ಸಿನಿಮಾಕ್ಕಿಲ್ಲ ಬಿಡುಗಡೆ ಭಾಗ್ಯ

ಅಣ್ಣಾವ್ರ ಬರ್ತ್ ಡೇ: ಸಮಾಧಿಗೆ ಕುಟುಂಬಸ್ಥರಿಂದ ಪೂಜೆ, ಯಾರೆಲ್ಲಾ ಬಂದಿದ್ರು ನೋಡಿ

ಮುಂದಿನ ಸುದ್ದಿ
Show comments