Select Your Language

Notifications

webdunia
webdunia
webdunia
webdunia

ಸೀಮಂತ ಕಾರ್ಯಕ್ರಮದಲ್ಲಿ ನೇತ್ರದಾನ ಮಾಡಿ ಮಾದರಿಯಾದ ನಟ ಗೋವಿಂದೇಗೌಡ ದಂಪತಿ

ಪುನೀತ್ ರಾಜ್ ಕುಮಾರ್
ಬೆಂಗಳೂರು , ಮಂಗಳವಾರ, 22 ಫೆಬ್ರವರಿ 2022 (10:40 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮೇಲಿನ ಅಭಿಮಾನದಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ಗೋವಿಂದೇಗೌಡ ಮತ್ತು ದಿವ್ಯ ಶ್ರೀ ದಂಪತಿ ನೇತ್ರದಾನ ಮಾಡುವ ಮೂಲಕ ಮಾದರಿಯಾಗಿದ್ದಾರೆ.

ದಿವ್ಯಾ ಸೀಮಂತ ಕಾರ್ಯಕ್ರಮದಲ್ಲಿ ದಂಪತಿ ನೇತ್ರದಾನ ಮಾಡಲು ನೋಂದಣಿ ಮಾಡಿದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ. ಸಾಮಾನ್ಯವಾಗಿ ಸೆಲೆಬ್ರಿಟಿ ದಂಪತಿಗಳು ಸೀಮಂತ ಕಾರ್ಯಕ್ರಮವನ್ನು ಅದ್ಧೂರಿಯಾಗಿ ಮಾಡುವುದು ಮಾಮೂಲು. ಆದರೆ ಈ ದಂಪತಿ ಸರಳವಾಗಿ ಕಾರ್ಯಕ್ರಮ ಮಾಡಿ ನೇತ್ರದಾನದ ಪ್ರತಿಜ್ಞೆ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ತಮಗೆ ಪುನೀತ್ ರಾಜ್ ಕುಮಾರ್ ಎಂದರೆ ಅಭಿಮಾನ. ಅವರ ಮೇಲಿನ ಅಭಿಮಾನದಿಂದಲೇ ಈ ಕೆಲಸಕ್ಕೆ ಮುಂದಾಗಿರುವುದಾಗಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಶ್ಮಿಕಾ ಜೊತೆಗಿನ ವಿವಾಹ ಸುದ್ದಿಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ