Webdunia - Bharat's app for daily news and videos

Install App

ಅಭಿಮಾನಿಗಳ ಅಭಿಮಾನಕ್ಕೆ ಸಾಟಿಯಾರು? ಸುದೀಪ್ ಅನಾರೋಗ್ಯದ ಅರಕೆ ಸಲ್ಲಿಸಿದ ಪ್ಯಾನ್ಸ್!

Webdunia
ಬುಧವಾರ, 10 ನವೆಂಬರ್ 2021 (08:03 IST)
ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗ ದೊಡ್ಡದು. ಫ್ಯಾನ್ಸ್ ಬಗ್ಗೆ ಸುದೀಪ್ ಅಪಾರ ಕಾಳಜಿ ತೋರಿಸುತ್ತಾರೆ.
ಅನಾರೋಗ್ಯದಲ್ಲಿದ್ದ ಎಷ್ಟೋ ಕುಟುಂಬಗಳಿಗೆ ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಸಹಾಯ ಆಗಿದೆ. ಅದೇ ರೀತಿ ಸುದೀಪ್ ಆರೋಗ್ಯಕ್ಕಾಗಿ ಅಭಿಮಾನಿಗಳು ಕೂಡ ಪ್ರತಿ ದಿನ ದೇವರಲ್ಲಿ ಪ್ರಾರ್ಥಿಸುತ್ತಾರೆ. ಕೆಲವೇ ತಿಂಗಳ ಹಿಂದೆ ಸುದೀಪ್ ಅವರಿಗೆ ಕೊರೊನಾ ವೈರಸ್ ತಗುಲಿತ್ತು. ಆ ಸಂದರ್ಭದಲ್ಲಿ ಅವರು ಬೇಗ ಗುಣಮುಖರಾಗಲಿ ಎಂದು ಫ್ಯಾನ್ಸ್ ಹರಕೆ ಕಟ್ಟಿಕೊಂಡಿದ್ದರು. ಈಗ ಅದನ್ನು ತೀರಿಸಲಾಗಿದೆ.
ತಮ್ಮ ನೆಚ್ಚಿನ ಹೀರೋ ಬೇಗ ಗುಣಮುಖರಾದರೆ ಉರುಳು ಸೇವೆ ಮಾಡುವುದಾಗಿ ಹಲವು ಅಭಿಮಾನಿಗಳು ಹರಕೆ ಮಾಡಿಕೊಂಡಿದ್ದರು. ಮಂಗಳವಾರ (ನ.9) ಆ ಹರಕೆಯನ್ನು ತೀರಿಸಿದ್ದಾರೆ. ಮಲೆ ಮಹದೇಶ್ವರನ ಬೆಟ್ಟದಲ್ಲಿ ಅಭಿಮಾನಿಗಳು ಉರುಳುಸೇವೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಅದನ್ನು ಕಂಡು ಕಿಚ್ಚ ಸುದೀಪ್ ಧನ್ಯವಾದ ಅರ್ಪಿಸಿದ್ದಾರೆ. ಜನರ ಅಭಿಮಾನಕ್ಕೆ ಅವರು ಮನಸೋತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments