Select Your Language

Notifications

webdunia
webdunia
webdunia
webdunia

ವಿಷ್ಣು ಸ್ಮಾರಕ ನಿರ್ಮಾಣ ವಿಚಾರದಲ್ಲಿ ಗೊಂದಲ; ನಟ ಜಗ್ಗೇಶ್ ಹೇಳಿಕೆಗೆ ಬೆಂಬಲ ಸೂಚಿಸಿದ ನಟ ಉಪೇಂದ್ರ

ವಿಷ್ಣು ಸ್ಮಾರಕ ನಿರ್ಮಾಣ ವಿಚಾರದಲ್ಲಿ ಗೊಂದಲ; ನಟ ಜಗ್ಗೇಶ್ ಹೇಳಿಕೆಗೆ ಬೆಂಬಲ ಸೂಚಿಸಿದ ನಟ ಉಪೇಂದ್ರ
ಬೆಂಗಳೂರು , ಭಾನುವಾರ, 2 ಡಿಸೆಂಬರ್ 2018 (07:35 IST)
ಬೆಂಗಳೂರು : ವಿಷ್ಣು ಸ್ಮಾರಕ ನಿರ್ಮಾಣ ವಿಚಾರದಲ್ಲಿ ಗೊಂದಲ ಉಂಟಾಗಿರುವ ಹಿನ್ನಲೆಯಲ್ಲಿ ಇದೀಗ ಈ ಬಗ್ಗೆ ಸ್ಯಾಂಡಲ್ ವುಡ್  ನಟ ಜಗ್ಗೇಶ್ ನೀಡಿರುವ ಹೇಳಿಕೆಗೆ ಸ್ಯಾಂಡಲ್ ವುಡ್ ನ ಮತ್ತೊಬ್ಬ ನಟ ಉಪೇಂದ್ರ ಸಹಮತ  ನೀಡಿ ಚಪ್ಪಾಳೆ ತಟ್ಟಿದ್ದಾರೆ. 


ವಿಷ್ಣು ಸ್ಮಾರಕ ನಿರ್ಮಾಣ ವಿಚಾರದಲ್ಲಿ ನಡೆಯುತ್ತಿರುವ ವಿವಾದಗಳನ್ನು ನೋಡಿ ಬೇಸತ್ತ ನಟ ಜಗ್ಗೇಶ್ ಅವರು, “ಡಾ. ರಾಜ್‍ಕುಮಾರ್, ಡಾ. ವಿಷ್ಣುವರ್ಧನ್ ಮತ್ತು ಡಾ. ಅಂಬರೀಶ್ ಅವರಿಗೆ ಸ್ಮಾರಕ ಸಾಕು. ಮುಂದಿನ ಪೀಳಿಗೆಯವರಿಗೆ ಸ್ಮಾರಕ ಬೇಕು ಅಂದರೆ ನಮ್ಮ ಜಾಗದಲ್ಲೇ ಅಥವಾ ಅದಕ್ಕಾಗಿಯೇ ಒಂದು ಎಕರೆ ಜಾಗ ತಗೊಂಡು ಅಲ್ಲಿ ಸ್ಮಾರಕ ಮಾಡಿಕೊಳ್ಳಿ ಹಾಗೂ ನಮಗೇ ಸ್ಮಾರಕ ಮಾಡಿಕೊಡಿ ಎಂದು ಯಾವ ಕಲಾವಿದನೂ ಸರ್ಕಾರದ ಮುಂದೆ ಹೋಗಿ ಭಿಕ್ಷೆ ಬೇಡಬೇಡಿ” ಎಂದು ಹೇಳಿದ್ದರು.


ನಟ ಜಗ್ಗೇಶ್ ಅವರ ಈ ಹೇಳಿಕೆಯನ್ನು ಮೆಚ್ಚಿದ ನಟ ಉಪೇಂದ್ರ ಅವರು, ಜಗ್ಗೇಶ್ ಹೇಳಿಕೆಯ ಜೊತೆಗೆ ಅವರ ಫೋಟೊವನ್ನು  ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿ ಚಪ್ಪಾಳೆ ತಟ್ಟುವ ಇಮೋಜಿ ಹಾಕಿ ಬೆಂಬಲ ಸೂಚಿಸಿದ್ದಾರೆ. ಉಪೇಂದ್ರ ಅವರ ಈ ಟ್ವೀಟ್‍ಗೆ ನಟ ಜಗ್ಗೇಶ್ ಕೂಡ ಧನ್ಯವಾದ ತಿಳಿಸಿ, ಲವ್ ಯೂ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಾಸ್ಯ ನಟ ರಾಜ್ ಪಾಲ್ ಯಾದವ್ ಗೆ ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದ ದೆಹಲಿ ಹೈಕೋರ್ಟ್