Select Your Language

Notifications

webdunia
webdunia
webdunia
webdunia

ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ನಟ ಉಪೇಂದ್ರಗೆ ಬಿಗ್ ರಿಲೀಫ್

ಆಕ್ಷೇಪಾರ್ಹ ಹೇಳಿಕೆ ಪ್ರಕರಣದಲ್ಲಿ ನಟ ಉಪೇಂದ್ರಗೆ ಬಿಗ್ ರಿಲೀಫ್
ಬೆಂಗಳೂರು , ಗುರುವಾರ, 17 ಆಗಸ್ಟ್ 2023 (16:19 IST)
ಬೆಂಗಳೂರು: ಸಮುದಾಯವೊಂದರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾದ ಎರಡೂ ಪ್ರಕರಣದಲ್ಲಿ ನಟ ಉಪೇಂದ್ರಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.

ಸೋಷಿಯಲ್ ಮೀಡಿಯಾ ವಿಡಿಯೋವೊಂದರಲ್ಲಿ ಉಪೇಂದ್ರ ಮಾತಿನ ನಡುವೆ ಗಾದೆಯೊಂದನ್ನು ಬಳಸಿದ್ದು ಇದು ದಲಿತ ಸಮುದಾಯದವರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನಲೆಯಲ್ಲಿ ಉಪೇಂದ್ರ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶ ಪೊಲೀಸ್ ಠಾಣೆ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಾಗಿದ್ದವು.

ತಮ್ಮ ವಿರುದ್ಧ ಎಫ್ ಐಆರ್ ದಾಖಲಿಸುವುದರ ವಿರುದ್ಧ ತಡೆ ನೀಡುವಂತೆ ಉಪೇಂದ್ರ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಎರಡೂ ಠಾಣೆಗಳಲ್ಲಿ ಎಫ್ ಐಆರ್ ದಾಖಲಿಸದಂತೆ ತಡೆ ನೀಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮ್ಯಾ-ಡಾಲಿ ಧನಂಜಯ್ ಸಿನಿಮಾ ಕತೆ ಏನಾಯ್ತು? ಇಲ್ಲಿದೆ ಅಪ್ ಡೇಟ್