Webdunia - Bharat's app for daily news and videos

Install App

ಅವಹೇಳನ ಸುದ್ದಿ ಹರಡದಂತೆ ಕೋರ್ಟ್ ನಿಂದ ತಡೆ ತಂದ ನಟ ಜಗ್ಗೇಶ್

Krishnaveni K
ಗುರುವಾರ, 29 ಫೆಬ್ರವರಿ 2024 (11:14 IST)
Photo Courtesy: Twitter
ಬೆಂಗಳೂರು: ತಮ್ಮ ಬಗ್ಗೆ ಮಾಧ‍್ಯಮಗಳು, ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರೀ ಸುದ್ದಿ, ಪೋಸ್ಟ್ ಪ್ರಕಟಿಸಿದಂತೆ ನವರಸನಾಯಕ ಜಗ್ಗೇಶ್ ಕೋರ್ಟ್ ನಿಂದ ತಡೆಯಾಜ್ಞೆ ತಂದಿದ್ದಾರೆ.

ಇತ್ತೀಚೆಗೆ ಜಗ್ಗೇಶ್ ನೀಡಿದ ಕೆಲವು ಹೇಳಿಕೆಗಳು ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟ್ರೋಲ್ ಗೊಳಗಾಗಿದೆ. ವ್ತೂರು ಸಂತೋಷ್ ಬಗ್ಗೆ ಜಗ್ಗೇಶ್ ನೀಡಿದ ಹೇಳಿಕೆಗೆ ಅವರಿಗೆ ಪ್ರತಿಭಟನೆ ಬಿಸಿ ಎದುರಾಗಿತ್ತು. ಇದದರ ವಿರುದ್ಧ ಅವರು ಕೋರ್ಟ್ ಮೊರೆ ಹೋಗಿದ್ದರು.

ಇದೀಗ ತಮ್ಮ ಬಗ್ಗೆ ಸುಳ್ಳು, ಅವಹೇಳನಕಾರೀ ಸುದ್ದಿ ಪ್ರಕಟಿಸುವುದರ ವಿರುದ್ಧ ತಡೆಯಾಜ್ಞೆ ನೀಡಲು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅದರಂತೆ ಕೋರ್ಟ್ ಈಗ ಜಗ್ಗೇಶ್ ಬಗ್ಗೆ ಅಪಪ್ರಚಾರ ಮಾಡದಂತೆ ತಡೆಯಾಜ್ಞೆ ನೀಡಿದೆ. ಆ ಮೂಲಕ ಜಗ್ಗೇಶ್ ತಮ್ಮ ಬಗ್ಗೆ ಅಪಪ್ರಚಾರ ಮಾಡುವವರಿಗೆ ತಕ್ಕ ಉತ್ತರ ನೀಡಿದೆ.

ಇದು ತಾತ್ಕಾಲಿಕ ಆದೇಶವಾಗಿದ್ದು, ಏಪ್ರಿಲ್ 25 ಕ್ಕೆ ಮುಂದಿನ ವಿಚಾರಣೆ ನಡೆಯಲಿದೆ. ರಾಜ್ಯಸಭಾ ಸದಸ್ಯರೂ ಆಗಿರುವ ಜಗ್ಗೇಶ್ ಬಗ್ಗೆ ಅಪಪ್ರಚಾರ ಮಾಡದಂತೆ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್ ಆದೇಶ ನೀಡಿದೆ. ಅವರ ಪರವಾಗಿ ಅವರ ಪರ ವಕೀಲರು ನ್ಯಾಯಾಲಯಕ್ಕೆ ಎಲ್ಲವನ್ನೂ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments