Webdunia - Bharat's app for daily news and videos

Install App

ರಕ್ಷತ್ ಶೆಟ್ಟಿ ಹೆಸರು ಕೆಡಿಸುವ ಯತ್ನ ನಡೆಯುತ್ತಿದೆ!

Krishnaveni K
ಗುರುವಾರ, 1 ಫೆಬ್ರವರಿ 2024 (14:37 IST)
Photo Courtesy: Twitter
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಇತ್ತೀಚೆಗೆ ತಮ್ಮ ತವರಿನ ಬಬ್ಬು ಸ್ವಾಮಿ ದೈವದ ನೇಮೋತ್ಸವದಲ್ಲಿ ಭಾಗಿಯಾಗಿದ್ದರು. ಈ ವೇಳೆ ಅವರಿಗೆ ದೈವ ಅಭಯ ನೀಡಿದೆ.

ರಕ್ಷಿತ್ ಆಗಾಗ ಮಂಗಳೂರಿನಲ್ಲಿರುವ ತಮ್ಮ ಮನೆಗೆ ಭೇಟಿ ನೀಡುತ್ತಿರುತ್ತಾರೆ. ದೈವ ಕೋಲದ ಬಗ್ಗೆ ಅಪಾರ ಭಕ್ತಿಯಿರುವ ರಕ್ಷಿತ್ ಇತ್ತೀಚೆಗೆ ಬಬ್ಬು ಸ್ವಾಮಿ ಕೋಲದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದ್ದರು. ಕರಾವಳಿ ಭಾಗದ ಧಾರ್ಮಿಕ ಕಾರ್ಯಕ್ರಮಗಳ ಬಗ್ಗೆ ರಕ್ಷಿತ್ ಗೆ ಈಗಲೂ ಮೊದಲಿನಷ್ಟೇ ಗೌರವವಿದೆ ಎಂಬುದಕ್ಕೆ ಇದೇ ಸಾಕ್ಷಿ.  ಅಲೆವೂರು ಜೋಡು ರಸ್ತೆಯಲ್ಲಿ ನಡೆದ 118 ನೇ ನೇಮೋತ್ಸವದಲ್ಲಿ ಪಾಲ್ಗೊಂಡು ರಕ್ಷಿತ್ ಪೂಜೆ ನೆರವೇರಿಸಿದರು. ಜೊತೆಗೆ ತಮ್ಮ ಮುಂದಿನ ಯೋಜನೆಗಳಿಗೆ ಯಾವುದೇ ತೊಂದರೆಯಾಗದಂತೆ ದೈವದ ಮುಂದೆ ಬೇಡಿಕೊಂಡಿದ್ದಾರೆ. ಈ ವೇಳೆ ಅವರಿಗೆ ದೈವ ಅಭಯ ನೀಡಿದೆ.

ರಕ್ಷಿತ್ ಗೆ ದೈವ ನೀಡಿದ ಅಭಯವೇನು?
ನಿನ್ನ ಕೆಲಸ ಕಾರ್ಯಗಳಲ್ಲಿ ಧೈರ್ಯವಾಗಿ ಮುಂದೆ ಹೋಗು. ನಾನು ನಿನ್ನ ಜೊತೆಗಿದ್ದೆನೆ. ಯಾವುದೇ ವಿಘ್ನಗಳಾಗದಂತೆ ನೋಡಿಕೊಳ್ಳುತ್ತೇನೆ. ನಿನ್ನ ಹೆಸರು ಹಾಳು ಮಾಡಲು ಕೆಲವರು ಸಂಚು ಮಾಡುತ್ತಿದ್ದಾರೆ. ಅದು ನನಗೂ ಗೊತ್ತಾಗಿದೆ. ಅಂತಹ ದುಷ್ಟ ಶಕ್ತಿಗಳನ್ನು ನನ್ನ ಕಾಲ ಬುಡದಲ್ಲಿಟ್ಟು ನಿನ್ನ ಯೋಜನೆಗಳಿಗೆ ನಿನ್ನ ಬೆನ್ನುಲುಬಾಗಿ ನಿಲ್ಲುತ್ತೇನೆ’ ಎಂದು ರಕ್ಷಿತ್ ಗೆ ದೈವ ಧೈರ್ಯ ನೀಡಿದೆ.

ಇತ್ತೀಚೆಗಷ್ಟೇ ನಟ ರಕ್ಷಿತ್ ಶೆಟ್ಟಿ ‘ರಿಚರ್ಡ್ ಆಂಟನಿ’ ಸಿನಿಮಾ ನಿರ್ಮಾಣದಿಂದ ಹೊಂಬಾಳೆ ಫಿಲಂಸ್ ಹಿಂದೆ ಸರಿದಿತ್ತು ಎಂಬ ಸುದ್ದಿಯಿದೆ. ಕೆಲವರು ಕರಾವಳಿ ನಟರು ತಮ್ಮವರನ್ನು ಮಾತ್ರ ಬೆಳೆಸುತ್ತಾರೆ ಎಂದು ಆಪಾದಿಸಿದ್ದರು. ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ದೈವ ಈ ರೀತಿ ಎಚ್ಚರಿಕೆ ಕೊಟ್ಟಿದ್ದು ವಿಶೇಷ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮತ್ತೇ ಒಂದಾಗುವ ನಿರ್ಧಾರ ಕೈಗೊಂಡ ಬಾಲಿವುಡ್‌ನ ಸ್ಟಾರ್ ಜೋಡಿ, ವಕೀಲರು ಹೇಳಿದ್ದೇನು

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದಿನ ಸುದ್ದಿ
Show comments