ಮದುವೆಗೆ ಕರೆಯಲು ಪ್ರಯತ್ನಪಟ್ಟರೂ ಧನಂಜಯ್ ಗೆ ಸಿಗಲಿಲ್ಲವೇ ದರ್ಶನ್

Krishnaveni K
ಬುಧವಾರ, 5 ಫೆಬ್ರವರಿ 2025 (17:36 IST)
ಬೆಂಗಳೂರು: ಡಾಲಿ ಧನಂಜಯ್ ಮತ್ತು ಭಾವೀ ಪತ್ನಿ ಧನ್ಯತಾ ಇಂದು ತಮ್ಮ ಮದುವೆ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಧನಂಜಯ್ ಉತ್ತರ ನೋಡಿದರೆ ಮದುವೆಗೆ ಕರೆಯಲು ಪ್ರಯತ್ನಿಸಿದರೂ ದರ್ಶನ್ ಸಿಗಲಿಲ್ಲವೇ ಎಂಬ ಅನುಮಾನ ಮೂಡಿದೆ.

ನಟ ಡಾಲಿ ಧನಂಜಯ್ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಎಲ್ಲರಿಗೂ ಖುದ್ದಾಗಿ ಹೋಗಿ ತಾವೇ ಹಂಚಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಂದ ಹಿಡಿದು ರಾಜಕೀಯ ಗಣ್ಯರು, ಸ್ಯಾಂಡಲ್ ವುಡ್ ನ ಈಗಿನ ಸ್ಟಾರ್ ನಟರೆಲ್ಲರಿಗೂ ಧನಂಜಯ್ ಖುದ್ದಾಗಿ ಆಹ್ವಾನ ಪತ್ರಿಕೆ ನೀಡಿದ್ದಾರೆ.

ಆದರೆ ಇದುವರೆಗೆ ದರ್ಶನ್ ಗೆ ಆಹ್ವಾನ ನೀಡಿದ ಬಗ್ಗೆ ಸುದ್ದಿ ಬಂದಿರಲಿಲ್ಲ. ಹೀಗಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ನೀವು ಎಲ್ಲರಿಗೂ ಆಹ್ವಾನ ಪತ್ರಿಕೆ ನೀಡಿದ್ದೀರಿ. ಆದರೆ ದರ್ಶನ್ ರನ್ನು ಆಹ್ವಾನಿಸಿಲ್ಲವೇ ಎಂದು ಪ್ರಶ್ನಿಸಲಾಯಿತು.

ಇದಕ್ಕೆ ಉತ್ತರಿಸಿದ ಅವರು ಎಲ್ಲರನ್ನೂ ಕರೆದ ನಾನು ದರ್ಶನ್ ರನ್ನೂ ಸಂಪರ್ಕ ಮಾಡಲು ಪ್ರಯತ್ನ ಪಟ್ಟೇ ಪಟ್ಟಿರುತ್ತೇನೆ ಅಲ್ಲವೇ? ನನಗೆ ಸಾಧ್ಯವಾಗಲಿಲ್ಲ. ಹೀಗಾಗಿ ಖುದ್ದಾಗಿ ಆಹ್ವಾನಿಸಲು ಸಾಧ್ಯವಾಗಿಲ್ಲ. ಆದರೆ ಈ ಮೂಲಕವೂ ನಾವು ಅವರನ್ನು ಮದುವೆಗೆ ಆಹ್ವಾನಿಸುತ್ತಿದ್ದೇವೆ ಎಂದು ಬಹಿರಂಗವಾಗಿ ಆಮಂತ್ರಿಸಿದ್ದಾರೆ. ಆದರೆ ಡಾಲಿ ಧನಂಜಯ್ ಮಾತಿನ ಧಾಟಿ ನೋಡಿದರೆ ದರ್ಶನ್ ಅವರ ಕೈಗೆ ಸಿಗಲಿಲ್ಲವೇ ಎಂಬ ಅನುಮಾನ ಮೂಡಿಸುವಂತಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments