Webdunia - Bharat's app for daily news and videos

Install App

ರಾಮಾರ್ಜುನ ಸಿನಿಮಾ ಅನ್ಯಾಯಕ್ಕೆ ಧ್ವನಿಗೂಡಿಸಿದ ಸ್ಯಾಂಡಲ್ ವುಡ್

Webdunia
ಶನಿವಾರ, 6 ಫೆಬ್ರವರಿ 2021 (08:55 IST)
ಬೆಂಗಳೂರು: ರಾಮಾರ್ಜುನ ಸಿನಿಮಾ ಉತ್ತಮ ಪ್ರದರ್ಶನ ನೀಡುತ್ತಿದ್ದರೂ ಥಿಯೇಟರ್ ನಿಂದ ಎತ್ತಂಗಡಿ ಮಾಡಿದ್ದು ನಿರ್ದೇಶಕ, ನಟ ಅನೀಶ್ ಬೇಸರಕ್ಕೆ ಕಾರಣವಾಗಿದೆ. ಹೊಸಬರ ಚಿತ್ರಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಈಗ ನಟ ರಕ್ಷಿತ್ ಶೆಟ್ಟಿ, ಡಾರ್ಲಿಂಗ್ ಕೃಷ್ಣ ಮುಂತಾದವರು ಬೆನ್ನುಲುಬಾಗಿ ನಿಂತಿದ್ದಾರೆ.


ಹೊಸಬರು ಚಿತ್ರರಂಗಕ್ಕೆ ಹೊಸ ನಿರೀಕ್ಷೆಯೊಂದಿಗೆ ಹೆಜ್ಜೆ ಹಾಕುತ್ತಾರೆ. ಆದರೆ ಅವರ ಶ್ರಮವನ್ನು ಆರಂಭದಲ್ಲೇ ಚಿವುಟಿ ಹಾಕಿದರೆ ಚಿತ್ರರಂಗದಲ್ಲಿ ಬೆಳೆಯುವುದು ಕಷ್ಟವಾಗುತ್ತದೆ. ಇಂತಹವರಿಗೆ ನಾವು ಶಕ್ತಿಯಾಗಬೇಕು, ಸ್ಪೂರ್ತಿಯಾಗಬೇಕು ಎಂದು ರಕ್ಷಿತ್ ಶೆಟ್ಟಿ ಹೇಳಿದ್ದಾರೆ. ಧ್ರುವ ಸರ್ಜಾ ಕೂಡಾ ಸಾಮಾಜಿಕ ಜಾಲತಾಣದ ಮೂಲಕ ಅಭಿಮಾನಿಗಳಿಗೆ ಈ ಸಿನಿಮಾ ಪ್ರೋತ್ಸಾಹಿಸುವಂತೆ ಮನವಿ ಮಾಡಿದ್ದಾರೆ. ಈ ಮೊದಲು ಡಾರ್ಲಿಂಗ್ ಕೃಷ್ಣ ಕೂಡಾ ಇದೇ ಸಮಸ್ಯೆ ಎದುರಿಸಿದ್ದರು. ಲವ್ ಮಾಕ್ಟೇಲ್ ಸಿನಿಮಾವನ್ನೂ ಇದೇ ರೀತಿ ಎತ್ತಂಗಡಿ ಮಾಡಲಾಗಿತ್ತು. ಆದರೆ ಕಿಚ್ಚ ಸುದೀಪ್ ಸಹಾಯ ಆಗ ಕೃಷ್ಣಗೆ ಸಿಕ್ಕಿತ್ತು. ಮತ್ತೊಂದು ವಾರದಲ್ಲಿ ಲವ್ ಮಾಕ್ಟೇಲ್ ಭರ್ಜರಿ ರೆಸ್ಪಾನ್ಸ್ ಪಡೆದಿತ್ತು. ಹೀಗಾಗಿ ತಮ್ಮದೇ ಪರಿಸ್ಥಿತಿ ಎದುರಿಸುತ್ತಿರುವ ಅನೀಶ್ ಗೆ ಕೃಷ್ಣ ಬೆಂಬಲವಾಗಿ ನಿಂತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments